ಮೈಸೂರು ನಗರ

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.

ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎನ್ನುವ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯಕೀಯ ಅಧಿಕ್ಷಕ ಲಕ್ಷ್ಮೀಕಾಂತ್ ಅವರು ಏಳು ಮಂದಿಗೆ 48 ಗಂಟೆಯೊಳಗೆ ಸೂಕ್ತ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.

ಎನ್‌ಐಸಿಯುನ ಕರ್ತವ್ಯನಿರತ ವೈದ್ಯರು, ವಾರ್ಡ್ ಇನ್ ಚಾರ್ಜ್ ವೈದ್ಯರು, ಶುಶ್ರೂಷಕಿ, ಸ್ವಚ್ಛತಾ ಸಿಬ್ಬಂದಿ ಅಲ್ಲದೆ, ಮೃತ ಮಗುವನ್ನು ಹಸ್ತಾಂತರ ಮಾಡುವಾಗ ಉಡಾಫೆಯಿಂದ ವರ್ತಿಸಿದ ನರ್ಸ್, ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ.

ಮಗುವಿನ ಪೋಷಕರು ಮಾಡಿರುವ ಆರೋಪಗಳನ್ನು ಉಲ್ಲೇಖಿಸಿ ನೋಟಿಸ್ ಕೊಡಲಾಗಿದ್ದು, 48 ಗಂಟೆಯೊಳಗೆ ಉತ್ತರ ಕೊಡಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ. ಮಗುವಿನ ಮರಣೋತ್ತರ ಪರೀಕ್ಷೆಯನ್ನು ಗುರುವಾರ ಪೋಷಕರ ಸಮ್ಮುಖದಲ್ಲಿ ನಡೆಸಲಾಗಿದ್ದು, ಇರುವೆ ಕಚ್ಚಿದ್ದರಿಂದಲೇ ಮೃತಪಟ್ಟಿದೆಯೇ ಎಂಬುದರ ಬಗ್ಗೆ ವರದಿ ಪಡೆಯಲು ಮಧ್ಯಪ್ರದೇಶದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಪೊಲೀಸರು ತಾಯಿ, ತಂದೆ ಹಾಗೂ ಪೋಷಕರಿಂದ ಹೇಳಿಕೆಯನ್ನು ಪಡೆದುಕೊಂಡರು. ಆಸ್ಪತ್ರೆಗೆ ದಾಖಲಾದ ದಿನದಿಂದ ಮಗು ಸಾವಿನ ಖಚಿತಪಡಿಸುವ ತನಕ ನಡೆದಿರುವ ಎಲ್ಲ ದಿನಗಳ ದಿನಚರಿ ಕುರಿತಂತೆ ಮಾಹಿತಿ ಪಡೆದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago