ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎನ್ನುವ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯಕೀಯ ಅಧಿಕ್ಷಕ ಲಕ್ಷ್ಮೀಕಾಂತ್ ಅವರು ಏಳು ಮಂದಿಗೆ 48 ಗಂಟೆಯೊಳಗೆ ಸೂಕ್ತ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
ಎನ್ಐಸಿಯುನ ಕರ್ತವ್ಯನಿರತ ವೈದ್ಯರು, ವಾರ್ಡ್ ಇನ್ ಚಾರ್ಜ್ ವೈದ್ಯರು, ಶುಶ್ರೂಷಕಿ, ಸ್ವಚ್ಛತಾ ಸಿಬ್ಬಂದಿ ಅಲ್ಲದೆ, ಮೃತ ಮಗುವನ್ನು ಹಸ್ತಾಂತರ ಮಾಡುವಾಗ ಉಡಾಫೆಯಿಂದ ವರ್ತಿಸಿದ ನರ್ಸ್, ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ.
ಮಗುವಿನ ಪೋಷಕರು ಮಾಡಿರುವ ಆರೋಪಗಳನ್ನು ಉಲ್ಲೇಖಿಸಿ ನೋಟಿಸ್ ಕೊಡಲಾಗಿದ್ದು, 48 ಗಂಟೆಯೊಳಗೆ ಉತ್ತರ ಕೊಡಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ. ಮಗುವಿನ ಮರಣೋತ್ತರ ಪರೀಕ್ಷೆಯನ್ನು ಗುರುವಾರ ಪೋಷಕರ ಸಮ್ಮುಖದಲ್ಲಿ ನಡೆಸಲಾಗಿದ್ದು, ಇರುವೆ ಕಚ್ಚಿದ್ದರಿಂದಲೇ ಮೃತಪಟ್ಟಿದೆಯೇ ಎಂಬುದರ ಬಗ್ಗೆ ವರದಿ ಪಡೆಯಲು ಮಧ್ಯಪ್ರದೇಶದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಪೊಲೀಸರು ತಾಯಿ, ತಂದೆ ಹಾಗೂ ಪೋಷಕರಿಂದ ಹೇಳಿಕೆಯನ್ನು ಪಡೆದುಕೊಂಡರು. ಆಸ್ಪತ್ರೆಗೆ ದಾಖಲಾದ ದಿನದಿಂದ ಮಗು ಸಾವಿನ ಖಚಿತಪಡಿಸುವ ತನಕ ನಡೆದಿರುವ ಎಲ್ಲ ದಿನಗಳ ದಿನಚರಿ ಕುರಿತಂತೆ ಮಾಹಿತಿ ಪಡೆದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…