ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಸಿಯುನ ಉಸ್ತುವಾರಿ ವೈದ್ಯರು ಸೇರಿದಂತೆ ಏಳು ಮಂದಿಗೆ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಲಾಗಿದೆ.
ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಎನ್ಐಸಿಯುನಲ್ಲಿ ರಮಾಬಾಯಿನಗರದ ಸಿದ್ಧಾರ್ಥ ಎಂಬವರ ನವಜಾತ ಶಿಶು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರು ಇರುವೆ ಕಚ್ಚಿ ಮಗು ಸಾವನ್ನಪ್ಪಿದೆ ಎನ್ನುವ ಆರೋಪ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈದ್ಯಕೀಯ ಅಧಿಕ್ಷಕ ಲಕ್ಷ್ಮೀಕಾಂತ್ ಅವರು ಏಳು ಮಂದಿಗೆ 48 ಗಂಟೆಯೊಳಗೆ ಸೂಕ್ತ ಉತ್ತರ ನೀಡುವಂತೆ ನೋಟಿಸ್ ನೀಡಿದ್ದಾರೆ.
ಎನ್ಐಸಿಯುನ ಕರ್ತವ್ಯನಿರತ ವೈದ್ಯರು, ವಾರ್ಡ್ ಇನ್ ಚಾರ್ಜ್ ವೈದ್ಯರು, ಶುಶ್ರೂಷಕಿ, ಸ್ವಚ್ಛತಾ ಸಿಬ್ಬಂದಿ ಅಲ್ಲದೆ, ಮೃತ ಮಗುವನ್ನು ಹಸ್ತಾಂತರ ಮಾಡುವಾಗ ಉಡಾಫೆಯಿಂದ ವರ್ತಿಸಿದ ನರ್ಸ್, ಸಿಬ್ಬಂದಿಗೂ ನೋಟಿಸ್ ನೀಡಲಾಗಿದೆ.
ಮಗುವಿನ ಪೋಷಕರು ಮಾಡಿರುವ ಆರೋಪಗಳನ್ನು ಉಲ್ಲೇಖಿಸಿ ನೋಟಿಸ್ ಕೊಡಲಾಗಿದ್ದು, 48 ಗಂಟೆಯೊಳಗೆ ಉತ್ತರ ಕೊಡಬೇಕು. ತಪ್ಪಿದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ. ಮಗುವಿನ ಮರಣೋತ್ತರ ಪರೀಕ್ಷೆಯನ್ನು ಗುರುವಾರ ಪೋಷಕರ ಸಮ್ಮುಖದಲ್ಲಿ ನಡೆಸಲಾಗಿದ್ದು, ಇರುವೆ ಕಚ್ಚಿದ್ದರಿಂದಲೇ ಮೃತಪಟ್ಟಿದೆಯೇ ಎಂಬುದರ ಬಗ್ಗೆ ವರದಿ ಪಡೆಯಲು ಮಧ್ಯಪ್ರದೇಶದ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಪೊಲೀಸರು ತಾಯಿ, ತಂದೆ ಹಾಗೂ ಪೋಷಕರಿಂದ ಹೇಳಿಕೆಯನ್ನು ಪಡೆದುಕೊಂಡರು. ಆಸ್ಪತ್ರೆಗೆ ದಾಖಲಾದ ದಿನದಿಂದ ಮಗು ಸಾವಿನ ಖಚಿತಪಡಿಸುವ ತನಕ ನಡೆದಿರುವ ಎಲ್ಲ ದಿನಗಳ ದಿನಚರಿ ಕುರಿತಂತೆ ಮಾಹಿತಿ ಪಡೆದರು.
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…