ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಮಗು ಇರುವೆ ಕಚ್ಚಿ ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ.
ಏಪ್ರಿಲ್.15ರಂದು ಅವಧಿ ಪೂರ್ವ ಜನನವಾಗಿದ್ದ ಗಂಡು ಮಗು ಇಂದು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.
ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ಇತ್ತು. ಈ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಚಿಕಿತ್ಸೆ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಮಗುವಿನ ಪೋಷಕರು ವೈದ್ಯರ ಮೇಲೆ ಗಂಭೀರ ಆರೋಪ ಮಾಡಿದ್ದು, ಇರುವೆಗಳಿವೆ ಎಂದು ಸಿಬ್ಬಂದಿಗೆ ತಿಳಿಸಿದ್ದೆವು. ತುಂಬಾ ಇರುವೆಗಳಿದ್ದವು, ಈ ಬಗ್ಗೆ ಗಮನಕ್ಕೆ ತಂದಾಗ ಸಿಹಿ ಕಾರಣಕ್ಕೆ ಒಂದೆರೆಡು ಇವೆ ಎಂದು ಸಮಾಜಾಯಿಸಿ ನೀಡಿದ್ರು. ಈಗ ನೋಡಿದ್ರೆ ಮಗುವೇ ತೀರಿಕೊಂಡಿದೆ ಎಂದು ಹೇಳುತ್ತಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…
ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…
ವಸಂತ್ ಕುಮಾರ್, ಮೈಸೂರು ಮಠ ಪ್ರತಿ ವರ್ಷವೂ ಪಾಲಿಕೆಯ ಬಜೆಟ್ನಲ್ಲಿ ರಸ್ತೆ ದುರಸ್ತಿಗಾಗಿ ಇಂತಿಷ್ಟು ಹಣವನ್ನು ನಿಗದಿಪಡಿಸಲಾಗುತ್ತದೆ. ೨೦೨೪-೨೦೨೫ರಲ್ಲಿ ಕೊಟ್ಟ…
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…