ಮೈಸೂರು: ಇಲ್ಲಿನ ರೈಲು ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನ ನಡೆದಿದ್ದು, ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.
ಕೆಲವೇ ಗಂಟೆಗಳಲ್ಲಿ ರೈಲ್ವೆ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ತಾಯಿಯ ಜೊತೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಅಪಹರಣ ಮಾಡಿದ್ದರು. ಬಳಿಕ ರೈಲ್ವೆ ಪೊಲೀಸರಿಗೆ ಮಗುವಿನ ಪೋಷಕರು ಮಾಹಿತಿ ನೀಡಿದ್ದರು.
ಇದನ್ನು ಓದಿ: ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದ ತಾಯಿ..!
ಪೊಲೀಸರು ಸಿಸಿ ಕ್ಯಾಮರಾ ದೃಶ್ಯಾವಳಿ ಗಮನಿಸಿದಾಗ ವೃದ್ಧೆ ಮಗುವನ್ನು ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ರೈಲು ನಿಲ್ದಾಣದಲ್ಲಿ ವೃದ್ಧೆಯನ್ನು ಬಂಧಿಸಿ ಮಗುವನ್ನು ವಶಕ್ಕೆ ಪಡೆದಿದ್ದಾರೆ.
ಹಾಸನ ಮೂಲದ ನಂದಿನಿ ಎಂಬುವವರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…