ಮೈಸೂರು ನಗರ

ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮರಗಳನ್ನು ಕಡಿದ ಜಾಗದಲ್ಲೇ ಮಕ್ಕಳು ಅಭಿಯಾನ ನಡೆಸಿದ್ದಾರೆ. ನಾವು ಮಕ್ಕಳು, ಮುಂದಿನ ಪ್ರಜೆಗಳು ಆದ್ದರಿಂದ ನಮಗೊಂದಿಷ್ಟು ಮರಗಳನ್ನು ಉಳಿಸಿ ಎಂದು ಅಭಿಯಾನ ನಡೆಸಿದ್ದು, ಮರವಿಲ್ಲದೇ ನರನಿರಬಲ್ಲನೇ ಎಂಬ ಶೀರ್ಪಿಕೆಯಡಿ ಜನಜಾಗೃತಿ ಮೂಡಿಸಿದರು.

ನಗರದ ಹೈದರಾಲಿ ರಸ್ತೆಯಲ್ಲೇ ಶಾಮಿಯಾನ ಹಾಕಿ ಜನಜಾಗೃತಿ ಮೂಡಿಸಿದ ಮಕ್ಕಳು ಇನ್ನು ಮುಂದೆ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಬೇಡಿ ಎಂದು ಮನವಿ ಮಾಡಿದರು. ಇದೇ ವೇಳೆ ಪರಿಸರ ಜಾಗೃತಿ ಕುರಿತು ಗೀತ ಗಾಯನ ಪ್ರಸ್ತುತಪಡಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಡಾ.ಟಿ.ಎಸ್ ಹರ್ಷ ಅವರು ಮರವಿಲ್ಲದೆ ನರನಿರಬಲ್ಲನೆ ಎಂಬ ವಿಚಾರ ಕುರಿತು ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ಪರಿಸರವಾದಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

5 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

8 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

12 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

14 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

15 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

16 hours ago