ಮೈಸೂರು ನಗರ

ಮೈಸೂರು| ಮರ ಕಡಿದ ಜಾಗದಲ್ಲಿ ಮಕ್ಕಳಿಂದ ಅಭಿಯಾನ

ಮೈಸೂರು: ರಸ್ತೆ ಅಗಲೀಕರಣಕ್ಕಾಗಿ 40ಕ್ಕೂ ಹೆಚ್ಚು ಮರಗಳನ್ನು ಕಡಿದು ಹಾಕಿರುವ ಪ್ರಕರಣ ಇದೀಗ ತೀವ್ರ ಕಾವು ಪಡೆದುಕೊಂಡಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ವಿಶ್ವ ಭೂ ದಿನಾಚರಣೆಯ ಹಿನ್ನೆಲೆಯಲ್ಲಿ ಇಂದು ಮರಗಳನ್ನು ಕಡಿದ ಜಾಗದಲ್ಲೇ ಮಕ್ಕಳು ಅಭಿಯಾನ ನಡೆಸಿದ್ದಾರೆ. ನಾವು ಮಕ್ಕಳು, ಮುಂದಿನ ಪ್ರಜೆಗಳು ಆದ್ದರಿಂದ ನಮಗೊಂದಿಷ್ಟು ಮರಗಳನ್ನು ಉಳಿಸಿ ಎಂದು ಅಭಿಯಾನ ನಡೆಸಿದ್ದು, ಮರವಿಲ್ಲದೇ ನರನಿರಬಲ್ಲನೇ ಎಂಬ ಶೀರ್ಪಿಕೆಯಡಿ ಜನಜಾಗೃತಿ ಮೂಡಿಸಿದರು.

ನಗರದ ಹೈದರಾಲಿ ರಸ್ತೆಯಲ್ಲೇ ಶಾಮಿಯಾನ ಹಾಕಿ ಜನಜಾಗೃತಿ ಮೂಡಿಸಿದ ಮಕ್ಕಳು ಇನ್ನು ಮುಂದೆ ಯಾವುದೇ ಕಾರಣಕ್ಕೂ ಮರಗಳನ್ನು ಕಡಿಯಬೇಡಿ ಎಂದು ಮನವಿ ಮಾಡಿದರು. ಇದೇ ವೇಳೆ ಪರಿಸರ ಜಾಗೃತಿ ಕುರಿತು ಗೀತ ಗಾಯನ ಪ್ರಸ್ತುತಪಡಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪರಿಸರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಡಾ.ಟಿ.ಎಸ್ ಹರ್ಷ ಅವರು ಮರವಿಲ್ಲದೆ ನರನಿರಬಲ್ಲನೆ ಎಂಬ ವಿಚಾರ ಕುರಿತು ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮೈಸೂರಿನ ಪರಿಸರವಾದಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ನೂರಾರು ಜನರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago