ಮೈಸೂರು ನಗರ

ಚಿಣ್ಣರ ಪ್ರತಿಭೆಗೆ ರಂಗಭೂಮಿ ಸಹಕಾರಿ ; ಹೆಚ್.ಜನಾರ್ಧನ್‌

ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಹಾಗೂ ಖ್ಯಾತ ಜನಪದ ಗಾಯಕ ಹೆಚ್. ಜನಾರ್ಧನ್ ಹೇಳಿದರು.

ನಗರದ ಬೋಗಾದಿ ರಸ್ತೆಯಲ್ಲಿರುವ ಧ್ವನ್ಯಾಲೋಕದಲ್ಲಿ ಮಕ್ಕಳ ಲೋಕ-೨೦೨೫ ಧ್ವನ್ಯಾಲೋಕ, ಜನಮನ ಸಾಂಸ್ಕ ತಿಕ ಸಂಘಟನೆ, ಸಮತಾ ವೇದಿಕೆ ಸಹಯೋಗದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರದ ಉಧ್ಘಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ದೇಶದ ಆಸ್ತಿ. ಹೀಗಾಗಿ ಮಕ್ಕಳಿಗೆ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರೆಯುದಕ್ಕೆ ಬೀಡಬೇಕು. ಅಂತಹ ಆಸಕ್ತಿಯನ್ನು ಹೊರತರುವಲ್ಲಿ ರಂಗಭೂಮಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ಮಕ್ಕಳು ಪ್ರಸುತ್ತ ದಿನಗಳಲ್ಲಿ ಮೊಬೈಲ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಏಕಾಗ್ರತೆಯನ್ನು ಸಹ ಕಳೆದುಕೊಳ್ಳತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮಕ್ಕಳು ಶಿಬಿರಗಳಲ್ಲಿ ತೋಡಗಿಸಿ ಕೊಳ್ಳವುದರಿಂದ ಉತ್ತಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳತ್ತಾರೆ. ಇಲ್ಲಿ ೨೦ ದಿನ ನಡೆಯುವ ಬೇಸಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆಗಳಲ್ಲಿ ತೋಡಗಿಕೊಳ್ಳುವುದರಿಂದ ಉತ್ತಮ ಮೌಲ್ಯಗಳನ್ನು ಕಲಿಯುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ವಿಜ್ಞಾನಿ ಡಾ.ರತಿರಾವ್, ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧ್ವನ್ಯಾಲೋಕದ ಮುಖ್ಯಸ್ಥೆ ಪ್ರೊ.ಜಯಶ್ರೀ ಸಂಜಯ್, ರಂಗಕರ್ಮಿಗಳಾದ ಕೆ.ಆರ್.ಸುಮತಿ, ಸುಪ್ರೀತ್ ಭಾರದ್ವಾಜ್, ರೂಬಿನ್ ಸಂಜಯ್, ವಿದುಷಿ ಹರಿಣಾಕ್ಷಿ ಸೇರಿದಂತೆ ಚಿಣ್ಣರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

34 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

1 hour ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

2 hours ago