ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಹಾಗೂ ಖ್ಯಾತ ಜನಪದ ಗಾಯಕ ಹೆಚ್. ಜನಾರ್ಧನ್ ಹೇಳಿದರು.
ನಗರದ ಬೋಗಾದಿ ರಸ್ತೆಯಲ್ಲಿರುವ ಧ್ವನ್ಯಾಲೋಕದಲ್ಲಿ ಮಕ್ಕಳ ಲೋಕ-೨೦೨೫ ಧ್ವನ್ಯಾಲೋಕ, ಜನಮನ ಸಾಂಸ್ಕ ತಿಕ ಸಂಘಟನೆ, ಸಮತಾ ವೇದಿಕೆ ಸಹಯೋಗದಲ್ಲಿ ನಡೆದ ಮಕ್ಕಳ ಬೇಸಿಗೆ ಶಿಬಿರದ ಉಧ್ಘಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ದೇಶದ ಆಸ್ತಿ. ಹೀಗಾಗಿ ಮಕ್ಕಳಿಗೆ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರೆಯುದಕ್ಕೆ ಬೀಡಬೇಕು. ಅಂತಹ ಆಸಕ್ತಿಯನ್ನು ಹೊರತರುವಲ್ಲಿ ರಂಗಭೂಮಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.
ಮಕ್ಕಳು ಪ್ರಸುತ್ತ ದಿನಗಳಲ್ಲಿ ಮೊಬೈಲ್ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಜೊತೆಗೆ ಏಕಾಗ್ರತೆಯನ್ನು ಸಹ ಕಳೆದುಕೊಳ್ಳತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಮಕ್ಕಳು ಶಿಬಿರಗಳಲ್ಲಿ ತೋಡಗಿಸಿ ಕೊಳ್ಳವುದರಿಂದ ಉತ್ತಮ ವ್ಯಕ್ತಿತ್ವವನ್ನು ಬೆಳಸಿಕೊಳ್ಳತ್ತಾರೆ. ಇಲ್ಲಿ ೨೦ ದಿನ ನಡೆಯುವ ಬೇಸಿಗೆ ಶಿಬಿರದಲ್ಲಿ ವಿವಿಧ ಚಟುವಟಿಕೆಗಳಲ್ಲಿ ತೋಡಗಿಕೊಳ್ಳುವುದರಿಂದ ಉತ್ತಮ ಮೌಲ್ಯಗಳನ್ನು ಕಲಿಯುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ವಿಜ್ಞಾನಿ ಡಾ.ರತಿರಾವ್, ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧ್ವನ್ಯಾಲೋಕದ ಮುಖ್ಯಸ್ಥೆ ಪ್ರೊ.ಜಯಶ್ರೀ ಸಂಜಯ್, ರಂಗಕರ್ಮಿಗಳಾದ ಕೆ.ಆರ್.ಸುಮತಿ, ಸುಪ್ರೀತ್ ಭಾರದ್ವಾಜ್, ರೂಬಿನ್ ಸಂಜಯ್, ವಿದುಷಿ ಹರಿಣಾಕ್ಷಿ ಸೇರಿದಂತೆ ಚಿಣ್ಣರು ಉಪಸ್ಥಿತರಿದ್ದರು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…