ಮೈಸೂರು ನಗರ

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದರು.

ಸೋಮವಾರ ನಗರಪಾಲಿಕೆಯ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿ’ ಎಂಬ ಘೋಷವ್ಯಾಕ್ಯದಡಿ ಈ ಮ್ಯಾರಥಾನ್ ಓಟ ಆಯೋಜಿಸಲಾಗಿದೆ ಎಂದರು.

3 ಕಿಮೀ, 5 ಕಿಮೀ ಹಾಗೂ 10 ಕಿಮೀ ಎಂಬ ಮೂರು ವಿಭಾಗಗಳಲ್ಲಿ ಓಟ ನಡೆಯಲಿದೆ. 18 ರಿಂದ 40 ವರ್ಷ ವಯಸ್ಸಿನ ಹಾಗೂ 40 ವರ್ಷಕ್ಕಿಂತ ಮೆಲ್ಪಟ್ಟವರ ಗುಂಪುಗಳಾಗಿ ವಿಂಗಡಣೆ ಮಾಡಲಾಗಿದೆ. ಪುರುಷರು ಹಾಗೂ ಮಹಿಳೆಯರು ಭಾಗವಹಿಸಬಹುದು. ಇದರೊಂದಿಗೆ ವಿಶೇಷ ವರ್ಗದ ಗುಂಪನ್ನೂ ಸಹ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಫೆ.8 ರಂದು ಬೆಳಿಗ್ಗೆ 6 ಗಂಟೆಗೆ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮ್ಯಾರಥಾನ್‌ಗೆ ಚಾಲನೆ ನೀಡಲಾಗುತ್ತದೆ. ಮೂರು ಕಿಮೀ ದೂರದ ಓಟವು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಹೊರಟು ಕೆ.ಆರ್.ವೃತ್ತ, ಎಂಸಿಸಿ, ಬಸವೇಶ್ವರ ವೃತ್ತ, ಹಾರ್ಡಿಂಜ್ ವೃತ್ತ, ದೊಡ್ಡಗಡಿಯಾರದ ಮೂಲಕ ಬಂದು ಟೌನ್‌ಹಾಲ್ ಬಳಿ ಸಮಾಪ್ತಿಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

5 ಕಿಮೀ ಓಟವು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಿಂದ ಆರಂಭವಾಗಿ ದೊಡ್ಡ ಗಡಿಯಾರ, ದೇವರಾಜ ಅರಸ್ ರಸ್ತೆ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, ನೂರಡಿ ರಸ್ತೆ, ಬಸವೇಶ್ವರ ವೃತ್ತ, ಹಾರ್ಡಿಂಜ್ ವೃತ್ತದ ಮೂಲಕ ಪುರಭವನ ಆವರಣದಲ್ಲಿ ಮುಕ್ತಾಯವಾಗಲಿದೆ ಎಂದರು. ಅದೇ ರೀತಿ 10 ಕಿಮೀ, 5 ಕಿಮೀ ಓಟದ ಹಾದಿಯಲ್ಲೇ ಎರಡು ಬಾರಿ ಕ್ರಮಿಸಬೇಕು ಎಂದು ತಿಳಿಸಿದರು.

ಓಟದಲ್ಲಿ ಭಾಗವಹಿಸುವವರಿಗೆ ಬಹುಮಾನಗಳನ್ನು ನೀಡಲಾಗುತ್ತದೆ. ಎಲ್ಲ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುತ್ತದೆ. ಇದಕ್ಕಾಗಿ 1.44 ಲಕ್ಷ ರೂಪಾಯಿಯನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.

ಸ್ವಚ್ಛತಾ ಓಟವನ್ನು ಆಯೋಜನೆ ಮಾಡಲು ವಿವಿಧ ಸಂಘ ಸಂಸ್ಥೆಗಳು ಸಹಕಾರ ನೀಡಿವೆ. ಭಾಗವಹಿಸುವ ಎಲ್ಲರಿಗೂ ಉಪಹಾರದ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ಅಲ್ಲದೇ ಅಗತ್ಯ ಸೌಲಭ್ಯಗಳನ್ನು, ಮುಂಜಾಗ್ರತಾ ಕ್ರಮಗಳನ್ನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಮೊದಲ ಸ್ಥಾನಕ್ಕೆ ಯತ್ನ
ನಗರವನ್ನು ಸ್ವಚ್ಛ ಸರ್ವೇಕ್ಷಣೆಯಲ್ಲಿ ಮತ್ತೆ ಪ್ರಥಮ ಸ್ಥಾನಕ್ಕೆ ತರುವ ನಿಟ್ಟಿನಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ನಡೆಸಲಾಗಿದೆ. ಮುಂದೆ ಚರ್ಚಾ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ. ಸಾರ್ವಜನಿಕರಿಗೂ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ ಎಂದರು.

ಸ್ವಚ್ಛತೆಗಾಗಿ ಎರಡು ಪಾಳಿಗಳಲ್ಲಿ ಕಸ ಸಂಗ್ರಹವನ್ನು ಮಾಡಲಾಗುತ್ತಿದೆ. ಮಧ್ಯಾಹ್ನದ ವೇಳೆ ವಾಣಿಜ್ಯ ಚಟುವಟಿಕೆಗಳು ನಡೆಯುವ ಪ್ರಮುಖ ರಸ್ತೆಗಳಲ್ಲಿ ಕಸ ಸಂಗ್ರಹ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಈ ಕ್ರಮವನ್ನು ಶೀಘ್ರದಲೇ ಅನುಷ್ಠಾನ ಮಾಡಲಾಗುತ್ತದೆ. ಇದರ ಸಾಧಕ-ಬಾಧಕ ನೋಡಿಕೊಂಡು ಮುಂದಿನ ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಯೋಗಾತ್ಮ ಶ್ರೀಹರಿ, ಉಪ ಆಯುಕ್ತ ಸೋಮಶೇಖರ್, ಸ್ವಚ್ಛ ಭಾರತ್ ಅಭಿಯಾನದ ನೊಡಲ್ ಅಧಿಕಾರಿ ಮೃತ್ಯುಂಜಯ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

10 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

11 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

11 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

11 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

11 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

12 hours ago