ಮೈಸೂರು ನಗರ

ಸಿಎಂ, ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ: ಪ್ರತಾಪ್‌ ಸಿಂಹ

ಮೈಸೂರು: ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಯ್ಕೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಸಾಧನೆ ಬಗ್ಗೆ ನನಗೆ ಗೌರವವಿದೆ. 100% ದಸರಾ ಧಾರ್ಮಿಕ ಆಚರಣೆ, ನಮ್ಮ ಧಾರ್ಮಿಕ ಆಚರಣೆ ಬಗ್ಗೆ ಬಾನು ಮುಷ್ತಾಕ್‌ಗೆ ಅಸಮಾಧಾನಗಳಿವೆ. ಬಾನು ಮುಷ್ತಾಕ್ ಮುಸ್ಲಿಂ ಎನ್ನುವ ಕಾರಣಕ್ಕೆ ನನ್ನ ವಿರೋಧವಿಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಹಿಂದೂ ಸಂಸ್ಕಾರಗಳ ಬಗ್ಗೆ ಬಾನು ಮುಷ್ತಾಕ್‌ಗೆ ಒಪ್ಪಿಗೆ ಇಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಬಗ್ಗೆ ಯಾಕೆ ಸಿಎಂ ಮಾತಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಕನ್ನಡಾಂಬೆಯ ಅರಿಶಿನ ಕುಂಕುಮ ಬಗ್ಗೆ ಆಡಿರುವ ಮಾತಿನ ಬಗ್ಗೆ ಬಾನು ಮುಷ್ತಾಕ್ ಕ್ಷಮೆ ಕೇಳಿದ್ದರೆ ನಾನು ಕೋರ್ಟ್‌ಗೆ ಹೋಗುತ್ತಿರಲಿಲ್ಲ. ಕ್ಷಮೆಯೆ ಕೇಳದವರು ಚಾಮುಂಡಿ ದೇವಿಗೆ ಗೌರವ ಕೊಡುತ್ತೀರಾ ಎಂದು ಹೇಗೆ ನಂಬುವುದು.? ಬಾನು ಮುಷ್ತಾಕ್ ಆಡಿರುವ ಮಾತಿಗೆ ಸ್ಪಷ್ಟೀಕರಣ ಕೊಡಲಿಲ್ಲ. ಬಾನು ಮುಷ್ತಾಕ್ ಬಹಿರಂಗವಾಗಿ ಕ್ಷಮೆ ಕೇಳಲಿ ನಾನು ಅರ್ಜಿ ವಾಪಸ್ ಪಡೆಯುತ್ತೇನೆ. ಭುವನೇಶ್ವರಿ ಬಗ್ಗೆ ಹೇಳಿರುವ ಹೇಳಿಕೆ ಬಗ್ಗೆ ಯಾಕೆ ಬಾನು ಮುಷ್ತಾಕ್ ಮಾತಾಡುತ್ತಿಲ್ಲ. ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತದೆ ಎಂದು ಕಾನೂನಾತ್ಮಕವಾಗಿಯೆ ಹೋರಾಟಕ್ಕೆ ಇಳಿದಿದ್ದೇನೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದು ಸಿಎಂ ಮೊನ್ನೆ ಹೇಳಿದ್ದಾರೆ.

ಮಂಡ್ಯದಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ಎಸೆದಿದ್ದು ಯಾರು ಸಿದ್ದರಾಮಯ್ಯ ಅವರೇ? ಹಿಂದೂಗಳಷ್ಟು ಜಾತ್ಯಾತೀತರು ಮತ್ತೊಬ್ಬರು ಇಲ್ಲ. ಸಿಎಂ ಹಿಂದೂಗಳಿಗೆ ಜಾತ್ಯಾತೀತ ಪಾಠ ಮಾಡಬೇಡಿ. ನಮ್ಮ ಸಂಸ್ಕೃತಿ ಬಗ್ಗೆ ಅಸಡ್ಡೆ ಮಾತಾಡುವ ಬಾನು ಮುಷ್ತಾಕ್ ಅವರು ನಮ್ಮ ಕಣ್ಣಿಗೆ ಘಜ್ನಿ, ಮೊಘಲರ ರೀತಿ ಕಾಣಿಸಿಕೊಳ್ಳುತ್ತಾರೆ. ಸಿಎಂ ಮುಸ್ಲಿಂಮರಿಗೆ ಉತ್ತೇಜನ ಕೊಡುತ್ತಿದ್ದಾರೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದ ಕ್ಷಣ ಮುಸ್ಲಿಂ ಇಲ್ಲಿ ಕಲ್ಲು ಎಸೆದಿದ್ದಾರೆ. ಸಿಎಂ – ಡಿಸಿಎಂ ಇಬ್ಬರಿಗೆ ಕೈ ಮುಗಿದು ಕೇಳ್ತಿನಿ ಬಾನು ಮುಷ್ತಾಕ್ ಭಾಷಣ ಒಪ್ಪುತ್ತೀರಾ ಹೇಳಿ? ಒಪ್ಪುವುದಾದರೆ ಧೈರ್ಯವಾಗಿ ಹೇಳಲಿ. ಸಿಎಂ – ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ. ನಾನು ಈಗಲೂ ಕೇಸ್ ವಾಪಸ್ ಪಡೆಯುತ್ತೇನೆ. ಕೇಸ್ ಮ್ಯಾನೇಜ್ ಮಾಡುವುದರಲ್ಲಿ ಸಿಎಂ ಬಹಳ ಚಾಣಾಕ್ಷರು.

ಮೂಡಾ ಕೇಸ್‌ನಲ್ಲೇ ಅದನ್ನು ನಾವು ನೋಡಿದ್ದೇವೆ. ನಮಗೆ ಕೇಸ್ ಬಗ್ಗೆ ಹೇಳಿ ಕೊಡುವುದಕ್ಕೆ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮೃಗಾಲಯದ ಆನೆ ಅಭಿ ಮತ್ತಿಗೋಡಿನಲ್ಲಿ ಕೊನೆಯುಸಿರು

ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.‌ ನಾಗರಹೊಳೆ ರಾಷ್ಟ್ರೀಯ…

7 mins ago

ರಾಜ್ಯದ ಹಲವೆಡೆ ತಾಪಮಾನ ಹೆಚ್ಚಳ: ಹೀಟ್‌ ಸ್ಟ್ರೋಕ್‌ ಭೀತಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್‌ ಸ್ಟ್ರೋಕ್‌ ಭೀತಿ ಎದುರಾಗಿದೆ. ಹಲವೆಡೆ…

15 mins ago

ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ

ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…

1 hour ago

ಓದುಗರ ಪತ್ರ: ಅನಿಲ ಸಿಲಿಂಡರ್ ಬೆಲೆ ಏರಿಕೆ ತರವಲ್ಲ

ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ರೂ.೬೦…

1 hour ago

ಓದುಗರ ಪತ್ರ: ಮೈಸೂರು ಆಕಾಶವಾಣಿ ಪ್ರಸರಣ ಸಾಮರ್ಥ್ಯ ಹೆಚ್ಚಿಸಿ

ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…

1 hour ago

ಓದುಗರ ಪತ್ರ: ಆಟ… ಕಿರೀಟ !

ಟಿ-೨೦ವಿಶ್ವಕಪ್‌ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…

1 hour ago