ಮೈಸೂರು ನಗರ

ಸಿಎಂ, ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ: ಪ್ರತಾಪ್‌ ಸಿಂಹ

ಮೈಸೂರು: ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ.

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಆಯ್ಕೆ ಪ್ರಶ್ನಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಅವರು, ಬಾನು ಮುಷ್ತಾಕ್ ಸಾಧನೆ ಬಗ್ಗೆ ನನಗೆ ಗೌರವವಿದೆ. 100% ದಸರಾ ಧಾರ್ಮಿಕ ಆಚರಣೆ, ನಮ್ಮ ಧಾರ್ಮಿಕ ಆಚರಣೆ ಬಗ್ಗೆ ಬಾನು ಮುಷ್ತಾಕ್‌ಗೆ ಅಸಮಾಧಾನಗಳಿವೆ. ಬಾನು ಮುಷ್ತಾಕ್ ಮುಸ್ಲಿಂ ಎನ್ನುವ ಕಾರಣಕ್ಕೆ ನನ್ನ ವಿರೋಧವಿಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಹೇಳಿಕೆ ಬಗ್ಗೆ ನಮ್ಮ ತಕಾರರು ಇದೆ ಹಿಂದೂ ಸಂಸ್ಕಾರಗಳ ಬಗ್ಗೆ ಬಾನು ಮುಷ್ತಾಕ್‌ಗೆ ಒಪ್ಪಿಗೆ ಇಲ್ಲ. ಕನ್ನಡಾಂಬೆ ಬಗ್ಗೆ ಬಾನು ಮುಷ್ತಾಕ್ ಹೇಳಿರುವ ಬಗ್ಗೆ ಯಾಕೆ ಸಿಎಂ ಮಾತಾಡುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಇನ್ನು ಕನ್ನಡಾಂಬೆಯ ಅರಿಶಿನ ಕುಂಕುಮ ಬಗ್ಗೆ ಆಡಿರುವ ಮಾತಿನ ಬಗ್ಗೆ ಬಾನು ಮುಷ್ತಾಕ್ ಕ್ಷಮೆ ಕೇಳಿದ್ದರೆ ನಾನು ಕೋರ್ಟ್‌ಗೆ ಹೋಗುತ್ತಿರಲಿಲ್ಲ. ಕ್ಷಮೆಯೆ ಕೇಳದವರು ಚಾಮುಂಡಿ ದೇವಿಗೆ ಗೌರವ ಕೊಡುತ್ತೀರಾ ಎಂದು ಹೇಗೆ ನಂಬುವುದು.? ಬಾನು ಮುಷ್ತಾಕ್ ಆಡಿರುವ ಮಾತಿಗೆ ಸ್ಪಷ್ಟೀಕರಣ ಕೊಡಲಿಲ್ಲ. ಬಾನು ಮುಷ್ತಾಕ್ ಬಹಿರಂಗವಾಗಿ ಕ್ಷಮೆ ಕೇಳಲಿ ನಾನು ಅರ್ಜಿ ವಾಪಸ್ ಪಡೆಯುತ್ತೇನೆ. ಭುವನೇಶ್ವರಿ ಬಗ್ಗೆ ಹೇಳಿರುವ ಹೇಳಿಕೆ ಬಗ್ಗೆ ಯಾಕೆ ಬಾನು ಮುಷ್ತಾಕ್ ಮಾತಾಡುತ್ತಿಲ್ಲ. ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತದೆ ಎಂದು ಕಾನೂನಾತ್ಮಕವಾಗಿಯೆ ಹೋರಾಟಕ್ಕೆ ಇಳಿದಿದ್ದೇನೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದು ಸಿಎಂ ಮೊನ್ನೆ ಹೇಳಿದ್ದಾರೆ.

ಮಂಡ್ಯದಲ್ಲಿ ಗಣೇಶ ಮೂರ್ತಿ ಮೇಲೆ ಕಲ್ಲು ಎಸೆದಿದ್ದು ಯಾರು ಸಿದ್ದರಾಮಯ್ಯ ಅವರೇ? ಹಿಂದೂಗಳಷ್ಟು ಜಾತ್ಯಾತೀತರು ಮತ್ತೊಬ್ಬರು ಇಲ್ಲ. ಸಿಎಂ ಹಿಂದೂಗಳಿಗೆ ಜಾತ್ಯಾತೀತ ಪಾಠ ಮಾಡಬೇಡಿ. ನಮ್ಮ ಸಂಸ್ಕೃತಿ ಬಗ್ಗೆ ಅಸಡ್ಡೆ ಮಾತಾಡುವ ಬಾನು ಮುಷ್ತಾಕ್ ಅವರು ನಮ್ಮ ಕಣ್ಣಿಗೆ ಘಜ್ನಿ, ಮೊಘಲರ ರೀತಿ ಕಾಣಿಸಿಕೊಳ್ಳುತ್ತಾರೆ. ಸಿಎಂ ಮುಸ್ಲಿಂಮರಿಗೆ ಉತ್ತೇಜನ ಕೊಡುತ್ತಿದ್ದಾರೆ. ಮುಸ್ಲಿಂಮರು ಶಾಂತಿ ಪ್ರಿಯರು ಎಂದ ಕ್ಷಣ ಮುಸ್ಲಿಂ ಇಲ್ಲಿ ಕಲ್ಲು ಎಸೆದಿದ್ದಾರೆ. ಸಿಎಂ – ಡಿಸಿಎಂ ಇಬ್ಬರಿಗೆ ಕೈ ಮುಗಿದು ಕೇಳ್ತಿನಿ ಬಾನು ಮುಷ್ತಾಕ್ ಭಾಷಣ ಒಪ್ಪುತ್ತೀರಾ ಹೇಳಿ? ಒಪ್ಪುವುದಾದರೆ ಧೈರ್ಯವಾಗಿ ಹೇಳಲಿ. ಸಿಎಂ – ಡಿಸಿಎಂ ಇಬ್ಬರು ಸೇರಿ ಬಾನು ಮುಷ್ತಾಕ್‌ರಿಂದ ಕನ್ನಡಿಗರಿಗೆ ಕ್ಷಮೆ ಕೇಳಿಸಲಿ. ನಾನು ಈಗಲೂ ಕೇಸ್ ವಾಪಸ್ ಪಡೆಯುತ್ತೇನೆ. ಕೇಸ್ ಮ್ಯಾನೇಜ್ ಮಾಡುವುದರಲ್ಲಿ ಸಿಎಂ ಬಹಳ ಚಾಣಾಕ್ಷರು.

ಮೂಡಾ ಕೇಸ್‌ನಲ್ಲೇ ಅದನ್ನು ನಾವು ನೋಡಿದ್ದೇವೆ. ನಮಗೆ ಕೇಸ್ ಬಗ್ಗೆ ಹೇಳಿ ಕೊಡುವುದಕ್ಕೆ ಬರಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

18 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

3 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

3 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

3 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

3 hours ago