ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ: ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ.

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ ವಿಚಾರ. ಬೇರೆ ನಾಯಕರ ಅಭಿಪ್ರಾಯ ನನ್ನ ಅಭಿಪ್ರಾಯ ಅಲ್ಲ. ಕಾಂಗ್ರೆಸ್ ಶಾಸಕರು ಸಿಎಂ ಬೇಕು ಅಂದ್ರೆ ಸಿದ್ದರಾಮಯ್ಯ ಅವರೇ ಇರ್ತಾರೆ. ಬೇಡ ಅಂದ್ರೆ ಅವರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.

ಇನ್ನು ಬಿಜೆಪಿಯಲ್ಲಿ ಬಣ ಬಡಿದಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದ್ರೆ ಹಿರಿಯರು ಸರಿ ಮಾಡುತ್ತಾರೆ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ನಿಂತು ಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮ ಆಗುತ್ತದೆ. ಕೆಲವರ ಮೇಲೆ ಈಗಾಗಲೇ ಕ್ರಮ ಆಗಿದೆ. ಇನ್ನು ಕೆಲವರ ಮೇಲೆ ತಡವಾದರೂ ಕ್ರಮ ಆಗೇ ಆಗುತ್ತದೆ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲಾ. ನಾವು ತತ್ವ ಸಿದ್ಧಾಂತದ ಮೇಲೆ ಪಕ್ಷ ಕಟ್ಟಿದವರು ಎಂದು ಹೇಳಿದರು.

ಇನ್ನು ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಂದು ತುರ್ತು ಪರಿಸ್ಥಿತಿ ಇದ್ದಿದ್ದು ಇಂದಿರಾಗಾಂಧಿಗೆ, ದೇಶಕ್ಕಲ್ಲ. ಇಂದಿರಾಗಾಂಧಿ ವಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸಿದರು. ಪತ್ರಿಕಾ ಸ್ವಾತಂತ್ರ್ಯದ ಹರಣ ಆಗಿತ್ತು. ಸರ್ವಾಧಿಕಾರಿ ಆಡಳಿತ ಮಾಡಿದ್ದರು. ನ್ಯಾಯಾಲಯಕ್ಕೂ ಗೌರವ ಸಿಗದಂತೆ ಮಾಡಿದ್ದರು. ಅಂದು ಇಂದಿರಾಗಾಂಧಿ ಹೇಳಿದ್ದೆ ಶಾಸನ ಎಂಬಂತೆ ಆಗಿತ್ತು. ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಿತು. ಇಂದಿರಾಗಾಂಧಿ ಕರಾಳ ತುರ್ತು ಪರಿಸ್ಥಿತಿಗೆ ಇಂದು 50 ವರ್ಷ ತುಂಬಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

10 mins ago

ಮುಂದುವರಿದ ಇರಾನ್-ಇಸ್ರೇಲ್‌ ಸಂಘರ್ಷ: ಭಾರತದ ಇಂಟರ್ನೆಟ್‌ ಸಂಪರ್ಕಕ್ಕೆ ಅಪಾಯ?

ಟೆಹರಾನ್:‌ ಕಳೆದ ಕೆಲ ದಿನಗಳಿಂದ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಅಕ್ಷರಶಃ ಇರಾನ್‌…

24 mins ago

ಪ್ರವಾಸಿಗರ ಆಕರ್ಷಣೆಯ ಭದ್ರದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ…

56 mins ago

ಬಿಸಿಲ ಝಳದ ನಡುವೆಯೇ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು…

1 hour ago

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

5 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

5 hours ago