ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ: ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌

ಮೈಸೂರು: ಸಿಎಂ ಬದಲಾವಣೆ ಬಿಜೆಪಿಯ ಅಜೆಂಡಾ ಅಲ್ಲ ಎಂದು ಮಾಜಿ ಎಂಎಲ್‌ಸಿ ಗೋ ಮಧುಸೂಧನ್‌ ಹೇಳಿದ್ದಾರೆ.

ನವೆಂಬರ್‌ನಲ್ಲಿ ಸಿಎಂ ಬದಲಾವಣೆ ವಿಚಾರ ಎಲ್ಲೆಡೆ ಚರ್ಚೆಯಾಗುತ್ತಿರುವ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಅವರ ಶಾಸಕರಿಗೆ ಬಿಟ್ಟ ವಿಚಾರ. ಬೇರೆ ನಾಯಕರ ಅಭಿಪ್ರಾಯ ನನ್ನ ಅಭಿಪ್ರಾಯ ಅಲ್ಲ. ಕಾಂಗ್ರೆಸ್ ಶಾಸಕರು ಸಿಎಂ ಬೇಕು ಅಂದ್ರೆ ಸಿದ್ದರಾಮಯ್ಯ ಅವರೇ ಇರ್ತಾರೆ. ಬೇಡ ಅಂದ್ರೆ ಅವರ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತೆ ಎಂದರು.

ಇನ್ನು ಬಿಜೆಪಿಯಲ್ಲಿ ಬಣ ಬಡಿದಾಟ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲವಿದ್ರೆ ಹಿರಿಯರು ಸರಿ ಮಾಡುತ್ತಾರೆ. ಅದನ್ನು ಬಿಟ್ಟು ಹಾದಿ ಬೀದಿಯಲ್ಲಿ ನಿಂತು ಪಕ್ಷದ ವಿರುದ್ಧ ಹಾಗೂ ನಾಯಕರ ವಿರುದ್ಧ ಮಾತನಾಡುವವರ ವಿರುದ್ಧ ಕ್ರಮ ಆಗುತ್ತದೆ. ಕೆಲವರ ಮೇಲೆ ಈಗಾಗಲೇ ಕ್ರಮ ಆಗಿದೆ. ಇನ್ನು ಕೆಲವರ ಮೇಲೆ ತಡವಾದರೂ ಕ್ರಮ ಆಗೇ ಆಗುತ್ತದೆ. ಪಕ್ಷಕ್ಕಿಂತ ಯಾರು ದೊಡ್ಡವರಲ್ಲಾ. ನಾವು ತತ್ವ ಸಿದ್ಧಾಂತದ ಮೇಲೆ ಪಕ್ಷ ಕಟ್ಟಿದವರು ಎಂದು ಹೇಳಿದರು.

ಇನ್ನು ತುರ್ತು ಪರಿಸ್ಥಿತಿಗೆ 50 ವರ್ಷವಾದ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಂದು ತುರ್ತು ಪರಿಸ್ಥಿತಿ ಇದ್ದಿದ್ದು ಇಂದಿರಾಗಾಂಧಿಗೆ, ದೇಶಕ್ಕಲ್ಲ. ಇಂದಿರಾಗಾಂಧಿ ವಿಪಕ್ಷ ನಾಯಕರನ್ನು ಜೈಲಿಗೆ ಕಳುಹಿಸಿದರು. ಪತ್ರಿಕಾ ಸ್ವಾತಂತ್ರ್ಯದ ಹರಣ ಆಗಿತ್ತು. ಸರ್ವಾಧಿಕಾರಿ ಆಡಳಿತ ಮಾಡಿದ್ದರು. ನ್ಯಾಯಾಲಯಕ್ಕೂ ಗೌರವ ಸಿಗದಂತೆ ಮಾಡಿದ್ದರು. ಅಂದು ಇಂದಿರಾಗಾಂಧಿ ಹೇಳಿದ್ದೆ ಶಾಸನ ಎಂಬಂತೆ ಆಗಿತ್ತು. ಅದರ ವಿರುದ್ಧ ದೇಶಾದ್ಯಂತ ಹೋರಾಟ ನಡೆಯಿತು. ಇಂದಿರಾಗಾಂಧಿ ಕರಾಳ ತುರ್ತು ಪರಿಸ್ಥಿತಿಗೆ ಇಂದು 50 ವರ್ಷ ತುಂಬಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

4 mins ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

3 hours ago

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

4 hours ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

5 hours ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

6 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

6 hours ago