ಮೈಸೂರು ನಗರ

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್ ಹೇಳಿಕೆಯೇ ಅಂತಿಮ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಪ್ರಶ್ನೆ ಕೇಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಗರಂ ಆದರು.

ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಸಿಎಂಗೆ ಸಚಿವ ವೆಂಕಟೇಶ್, ಎಚ್.ಸಿ.ಮಹದೇವಪ್ಪ, ಶಾಸಕರಾದ ಪುಟ್ಟರಂಗಶೆಟ್ಟಿ, ರವಿಶಂಕರ್, ನರೇಂದ್ರ ಸ್ವಾಮಿ ಸೇರಿದಂತೆ ಹಲವರು ಸಾಥ್‌ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದರು. ಯಾರು ಏನೇ ಹೇಳಿದರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನಾದರೂ ಹೇಳಿದ್ಯಾ? ಯಾಕೆ ಪದೇ ಪದೇ ಅದನ್ನೇ ಮಾತನಾಡುತ್ತೀರಾ.? ಈ ಬಗ್ಗೆ ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ. ಅದೇ ನಮಗೆಲ್ಲಾ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತೇನೆ.
ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್.15ರಂದು ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೆ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

ಇದನ್ನು ಓದಿ : ರಾಜ್ಯದಲ್ಲಿ ತಾರಕಕ್ಕೇರಿದ ಸಿಎಂ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಅಹಿಂದ ಸಂಘಟನೆಗಳು

ಇನ್ನು ಬಿಹಾರ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಇಲ್ಲಿಯವರೆಗೆ ನನ್ನನ್ನು ಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರುತ್ತೆ. ನಿತೀಶ್ ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ. ನಿತೀಶ್ ಕುಮಾರ್‌ಗೆ ಯಾವುದೇ ಸಿದ್ಧಾಂತ ಇಲ್ಲ. ಅವರು ಎಲ್ಲಾ ಪಕ್ಷಗಳನ್ನು ಬದಲಾಯಿಸಿದ್ದಾರೆ. ಈ ಕಾರಣ ಜನ ಇಂಡಿಯಾ ಒಕ್ಕೂಟದ ಪರ ಮತ ಹಾಕುತ್ತಾರೆ. ನಮ್ಮ ಗ್ಯಾರಂಟಿಗಳನ್ನೇ ನಿತೀಶ್ ಕುಮಾರ್ ಅಲ್ಲಿ ಘೋಷಣೆ ಮಾಡಿದ್ದಾರೆ. ಆದರು ಅಲ್ಲಿಯ ಜನ ಅವರನ್ನು ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರು ಇದ್ದಾರೆ. ಅವರಿಗೂ ನಮ್ಮ ಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ. ಬಿಹಾರದಲ್ಲಿ ಅತಿ ಹೆಚ್ಚಿನ ಬಡವರು ಇದ್ದಾರೆ ಎಂದು ಹೇಳಿದರು.

ಇನ್ನು ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಮುಂದುವರಿಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಒಂದು ಸತ್ಯ ಹೇಳುತ್ತೇನೆ ಕೇಳಿ. ಜನರು ಕಾಡಿನೊಳಗೆ ಓಡಾಡಲು ಶುರು ಮಾಡಿದ್ದಾರೆ‌. ಹೀಗಾಗಿ ಪ್ರಾಣಿಗಳು ಹೊರಬರಲು ಪ್ರಾರಂಭಿಸಿವೆ. ಕಾಡಿನೊಳಗೆ ಪ್ರಾಣಿಗಳಿಗೆ ಮೇವು, ನೀರು ಸಿಗುತ್ತಿಲ್ಲ. ಇದರಿಂದಲೂ ನಾಡಿಗೆ ಪ್ರಾಣಿಗಳು ಬರುತ್ತಿದೆ. ಕಾಡಂಚಿನಲ್ಲಿ ಅಕ್ರಮ ರೆಸಾರ್ಟ್‌ಗಳು ಹೆಚ್ಚಾಗುತ್ತಿದೆ. ಅವುಗಳಿಗೆ ಕಡಿವಾಣ ಹಾಕುವ ಕೆಲಸ ಮಾಡುತ್ತೇವೆ‌. ಸಫಾರಿಗಳ ಸಂಖ್ಯೆಯೂ ಹೆಚ್ಚಾಗಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಅದನ್ನು ಕಡಿಮೆ ಮಾಡುವ ಕೆಲಸ ಮಾಡುತ್ತೇವೆ‌. ಹುಲಿ ದಾಳಿ ಪ್ರಕರಣಕ್ಕೆ ನಾನೇ ಪ್ರತ್ಯೇಕ ಸಭೆ ಕರೆಯುತ್ತಿದ್ದೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago