ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಗಳೇ ಅಂತಿಮ. ನಾನು ಹೈಕಮಾಂಡ್ ಜೊತೆ ಮಾತನಾಡಿದ್ದೇನೆ. ಹೈಕಮಾಂಡ್ ನಾವೇ ತೀರ್ಮಾನ ಮಾಡುತ್ತೇವೆ ಎಂದು ಹೇಳಿದೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಹೈಕಮಾಂಡ್ ತನ್ನ ತೀರ್ಮಾನ ಹೇಳುತ್ತದೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರೇ ಅತೀ ಹೆಚ್ಚು ಚರ್ಚೆ ಮಾಡುತ್ತಿದ್ದೀರಾ. ನಾನು ಅಧಿವೇಶನದಲ್ಲಿ ಮಾತನಾಡಿದ ಮೇಲೂ ಈ ವಿಚಾರದಲ್ಲಿ ಯಾಕೆ ಪ್ರಶ್ನೆ ಕೇಳುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದರು.
ಇದನ್ನು ಓದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ
ಇನ್ನು ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರಾಜಣ್ಣ ಹಾಗೂ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರೆ ತಪ್ಪೇನಿದೆ. ಡಿ.ಕೆ .ಶಿವಕುಮಾರ್ ನಮ್ಮ ಪಕ್ಷದ ಅಧ್ಯಕ್ಷ. ಅವರನ್ನು ಭೇಟಿ ಮಾಡಬಾರದು ಎಂದು ಏನಾದ್ರು ಇದ್ಯಾ. ಅದರಲ್ಲಿ ಯಾವ ತಪ್ಪು ಇಲ್ಲ ಎಂದರು.
ಇನ್ನು ಎಲ್ಲರಿಗಿಂತ ಪಕ್ಷ ದೊಡ್ಡದು ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಖರ್ಗೆ ಹೇಳಿರುವುದು ಸರಿ ಇದೆ. ನಾವು ಮೊದಲಿನಿಂದಲೂ ವ್ಯಕ್ತಿಗಿಂತ ಪಕ್ಷ ದೊಡ್ಡದು ಎಂದು ಹೇಳುತ್ತಿದ್ದೇವೆ ಎಂದರು. ಇನ್ನು ಸ್ಥಳೀಯ ಮಟ್ಟದಲ್ಲಿ ಸಮಸ್ಯೆ ಬಗೆಹರಿಸಬೇಕೆಂಬ ಖರ್ಗೆ ಹೇಳಿಕೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ ಅವರು, ಸಮಸ್ಯೆಗಳು ಏನೇ ಇದ್ದರೂ ಅದನ್ನು ಹೈಕಮಾಂಡ್ ಬಗೆಹರಿಸುತ್ತದೆ ಎಂದು ಹೇಳುವ ಮೂಲಕ ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದರು.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…