Mysore
27
light rain

Social Media

ಶುಕ್ರವಾರ, 31 ಜುಲೈ 2026
Light
Dark

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಸಿಎಂ ಡಿಕೆಶಿ ಸ್ವಾಗತಿಸಲಿದ್ದಾರೆ.

10 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು 10.45ಕ್ಕೆ ಮೈಸೂರಿಗೆ ಆಗಮಿಸಿ 11.30ಕ್ಕೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. 12.30ಕ್ಕೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಂತರ 3.15ಕ್ಕೆ ಪ್ರಧಾನಿ ಮೋದಿ ಅವರನ್ನು ಓವಲ್‌ ಗ್ರೌಂಡ್‌ ಹೆಲಿಪ್ಯಾಡ್‌ ಬಳಿ ಸಿಎಂ ಡಿ.ಕೆ.ಶಿವಕುಮಾರ್‌ ಸ್ವಾಗತಿಸಲಿದ್ದಾರೆ. ಇದಾದ ನಂತರ ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ, ವಿವೇಕ ಸ್ಮಾರಕದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಪಾಲ್ಗೊಳ್ಳಲಿದ್ದಾರೆ.

 

Tags:
error: Content is protected !!