bhaskar rao
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಸಂಭವಿಸಲು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರೇ ನೇರ ಕಾರಣ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ, ಡಿಸಿಎಂ ಹಾಗು ಗೃಹಸಚಿವರೇ ನಿಮ್ಮ ಕೈಯ್ಯಲ್ಲಿ 11 ಜನರ ಸಾವಿನ ರಕ್ತವಿದೆ. ಈ ಸಾವುಗಳಿಗೆ ನೀವೇ ನೇರ ಹೊಣೆ. ಕಾರ್ಯಕ್ರಮದಲ್ಲಿ ಅವರ ಮಕ್ಕಳು, ಮೊಮ್ಮಕ್ಕಳಿಗೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಐಪಿಎಲ್ ಮ್ಯಾಚ್ ಗೆದ್ದಿರುವುದು ಒಂದು ದೊಡ್ಡ ಶಾಪ. ಗೆದ್ದ ಮೇಲೆ ಅದನ್ನ ಹೇಗೆ ವಿಜೃಂಭಣೆಯಿಂದ ಆಚರಿಸಬೇಕಿತ್ತು? ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಮಾಡಿದ್ದು ಸರಿಯಲ್ಲ. ಆರ್ಸಿಬಿ ಟೀಂ ಹೈಜಾಕ್ ಮಾಡಿಕೊಳ್ಳಲು ಸರ್ಕಾರ ಯತ್ನಿಸುತ್ತಿದೆ.
ಡಿಪಿಆರ್ ಅನುಮತಿ ಪಡೆಯದೇ ಕಾರ್ಯಕ್ರಮ ನಡೆಸಿದ್ರು. ಹೈಕೋರ್ಟ್ ನಿರ್ದೇಶಕ ಉಲ್ಲಂಘಿಸಿ ಕಾರ್ಯಕ್ರಮ ಮಾಡಿದ್ದಾರೆ. ಬೆಂಗಳೂರಿನಲ್ಲಿ ಏಳು ಏಜೆನ್ಸಿಗಳದ್ದೂ ತಪ್ಪಿದೆ. ಪರಸ್ಪರ ಒಬ್ಬರಿಗೊಬ್ಬರು ಹೊಂದಾಣಿಕೆ ಇಲ್ಲದೆ ಕಾರ್ಯಕ್ರಮ ಯಡವಟ್ಟಾಗಿದೆ. ಬೆಂಗಳೂರಿನಲ್ಲಿ ರಾತ್ರಿಯಿಡೀ ಸಂಭ್ರಮ ನಡೆಸಿ ಮರುದಿನ ಕಾರ್ಯಕ್ರಮ ನಡೆಸಿದ್ದು ತಪ್ಪು. ಇಂಟೆಲಿಜೆನ್ಸ್ ಫೇಲ್ ಆದಮೇಲೆ ಲಾ ಅಂಡ್ ಆರ್ಡರ್ ಆದ್ರೂ ಕಾರ್ಯನಿರ್ವಹಿಸಬೇಕಿತ್ತಲ್ಲವೇ? ಎಂದು ಪ್ರಶ್ನಿಸಿದ ಅವರು, ಆರ್ಸಿಬಿ ಕರ್ನಾಟಕ, ಭಾರತ ತಂಡವಲ್ಲ. ಇದೊಂದು ಖಾಸಗಿ ಕ್ಲಬ್ ಹರಾಜು ಹಾಕಿ ಖರೀದಿಸಿರುವ ತಂಡ. ನಾವು ಸಮವಸ್ತ್ರ ಹಾಕಿದ ಮೇಲೆ ದೊರೆ ವಿರುದ್ಧ ಮಾತನಾಡಲ್ಲ. ದೊರೆ ಕೊಟ್ಟ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…