ಮೈಸೂರು: ಅರಣ್ಯ ಇಲಾಖೆಯ ಗಣನೀಯ ಸೇವೆ ಸಲ್ಲಿಸಿರುವ ದಸರಾ ಗಜಪಡೆಯ ಅಭಿಮನ್ಯುವಿನ ಮಾವುತ ವಸಂತ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ದೊರೆತಿದೆ.
ವಸಂತ ಅವರು ಸುಮಾರು ವರ್ಷಗಳಿಂದ ಆನೆ ಅಭಿಮನ್ಯುವಿನ ಮಾವುತರಾಗಿದ್ದು, ಅದನ್ನು ಪೋಷಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.
ಕ್ಯಾಪ್ಟನ್ ಅಭಿಮನ್ಯು ಸತತ ನಾಲ್ಕು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದು, ಐದನೇ ಬಾರಿಗೆ ಅಂಬಾರಿ ಹೊರಲು ಎಲ್ಲಾ ರೀತಿಯಲ್ಲೂ ಸಜ್ಜಾಗುತ್ತಿದ್ದಾನೆ.
ದಸರಾ ಮಹೋತ್ಸವದ ಚಿನ್ನದ ಅಂಬಾರಿಯನ್ನು ಹೊರುವ ಕ್ಯಾಪ್ಟನ್ ಅಭಿಮನ್ಯುವಿನ ಮಾವುತ ವಸಂತ ಅವರು ಮುಖ್ಯಮಂತ್ರಿ ಪದಕ ಪಡೆದಿದ್ದಾರೆ. ವಸಂತ 100ಕ್ಕೂ ಹೆಚ್ಚು ಕಾಡಾನೆ ಹಾಗೂ ಹುಲಿ ಸೆರೆ ಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ಕಳೆದ 2017ರಲ್ಲಿ ಇಂಡೋನೇಷ್ಯಾ ದೇಶಕ್ಕೆ ಹೋಗಿ ಅಲ್ಲಿಯ ಆನೆಗಳಿಗೂ ಕೂಡ ತರಬೇತಿಯನ್ನು ಪಡೆಯಲು ಹಾಗೂ ರಾಜ್ಯದಲ್ಲಿ, ಶಿಬಿರಗಳಲ್ಲಿ ನೀಡುವ ತರಬೇತಿಯನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಈ ಎಲ್ಲಾ ಸಾಧನೆಗಳನ್ನು ಪರಿಗಣಿಸಿ ವಸಂತ ಅವರಿಗೆ ರಾಜ್ಯ ಸರ್ಕಾರ ಮುಖ್ಯಮಂತ್ರಿ ಪದಕ ನೀಡಿ ಗೌರವಿಸಿದೆ.
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…