pralhad joshi
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್ಪೋರ್ಟ್ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…