pralhad joshi
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್ಪೋರ್ಟ್ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…