ಮೈಸೂರು ನಗರ

ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್‌ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್‌ಪೋರ್ಟ್‌ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್‌ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್‌ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.

ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್‌ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

1 hour ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

2 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

2 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

3 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

3 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

4 hours ago