pralhad joshi
ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಹೊತ್ತು ಈ ಕ್ಷಣವೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆಯ ನೈತಿಕ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಒಂದು ಕ್ಷಣ ಕೂಡ ತಮ್ಮ ಸ್ಥಾನದಲ್ಲಿ ಮುಂದುವರಿಯಬಾರದು. ಈ ಕ್ಷಣವೇ ಸಿಎಂ ಹಾಗೂ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಬೆಂಗಳೂರು ಕಮಿಷನ್ ಬರವಣಿಗೆಯಲ್ಲಿ ಭದ್ರತೆ ನಿರಾಕರಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಮಾಡಿದ್ದೀರಿ. ನೀವೇ ನಿಮ್ಮ ಟ್ವಿಟ್ಟರ್ನಲ್ಲಿ ಅಭಿಮಾನಿಗಳಿಗೆ ಕರೆ ಕೊಟ್ಟಿಲ್ವ. ನಿಮ್ಮ ಡಿಸಿಎಂ ಏರ್ಪೋರ್ಟ್ಗೆ ಹೋಗಿ ಭಾವುಟ ಹಿಡಿದುಕೊಂಡು ಬರಲಿಲ್ವ. ಅಂದು ಇಡೀ ದಿನ ಡಿಕೆ.ಶಿವಕುಮಾರ್ ದಾದಾಗಿರಿ ಮಾಡಿದ್ದಾರೆ. ಹೈಕಮಾಂಡ್ನಲ್ಲಿ ಕಮಾಂಡ್ ಇದ್ದರೆ ಮೊದಲು ಇವರ ಮೇಲೆ ಕ್ರಮ ಕೈಗೊಳ್ಳಿ. ರಾಹುಲ್ಗಾಂಧಿ ಇಡೀ ಪ್ರಪಂಚದಾದ್ಯಂತ ಹೋಗಿ ಎಲ್ಲವನ್ನ ಮಾತನಾಡುತ್ತಾರೆ. ಈ ಘಟನೆ ಬಗ್ಗೆ ಅವರಿಗೆ ಗೊತ್ತಿಲ್ವ ಎಂದು ಕಿಡಿಕಾರಿದರು.
ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮೂರು ಜನ ಸತ್ತ ನಂತರವೂ ವಿಧಾನಸೌಧದ ಬಳಿ ಸಿಎಂ, ಡಿಸಿಎಂ, ಅವರ ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು, ಐಎಎಸ್ ಆಫೀಸರ್ಗಳು ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಅವರು ಸೆಲ್ಫಿ ತೆಗೆಸಿಕೊಳ್ಳುವಾಗ ಅಲ್ಲಿ ಮೂರು ಜನ ಸತ್ತಿದ್ರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? 11 ಜನ ಸತ್ತ ನಂತರೂ ಕಾರ್ಯಕ್ರಮ ನಡೆದಿದೆ. ಹೈಕೋರ್ಟ್ ಸುಮೋಟೊ ಕೇಸ್ ಹಾಕಿದ ನಂತರ ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…