ಮೈಸೂರು: ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣಗಳ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೋದು ಪಕ್ಕಾ ಎಂದು ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಭವಿಷ್ಯ ನುಡಿದಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾದರಿಯಲ್ಲೇ ರಾಜ್ಯದಲ್ಲೂ ಜೈಲಿನಿಂದಲೇ ಆಡಳಿತ ನಡೆಸುವ ಸ್ಥಿತಿ ಬರಲಿದೆ ಎಂದರು.
ಮುಡಾ ಪ್ರಕರಣದಲ್ಲಿ ಆಗಿರುವ ಹಗರಣದ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿತ್ತು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಬೇಕಿತ್ತು. ಆದರೆ ಇದ್ಯಾವುದು ಆಗಿಲ್ಲ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರದಲ್ಲಿ ಅವ್ಯವಹಾರ ಆಗಿದೆ ಎಂದು ಆರೋಪ ಮಾಡುತ್ತಿದ್ದಾರೆ ಅಂತಾ ಕಿಡಿಕಾರಿದರು.
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಅಧಿಕಾರ ನಡೆಸುತ್ತಿದ್ದಾರೆ. ನಮ್ಮದು ಏನೂ ಆಗಿಲ್ಲ ಅನ್ನೋ ರೀತಿ ಕಾಂಗ್ರೆಸ್ ಸರ್ಕಾರ ವರ್ತಿಸುತ್ತಿದೆ. ಈ ಬಗ್ಗೆ ನಾವು ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಸಾವಿರಾರು ಕೋಟಿ ಹಗರಣ ನಡೆದಿರುವುದರಿಂದ ಇ.ಡಿ ಮೂಲಕ ತನಿಖೆ ನಡೆಸಲು ಒತ್ತಾಯ ಮಾಡುತ್ತೇವೆ. ನ್ಯಾಯ ದೊರಕುವ ತನಕ ಈ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…