ಮೈಸೂರು: ಕುಮಾರಸ್ವಾಮಿ ಇಲ್ಲದಿದ್ದರೆ ಜಿ.ಟಿ.ದೇವೇಗೌಡರು ಮಗನ ಜೊತೆ ಜೈಲಿನಲ್ಲಿರಬೇಕಿತ್ತು ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆಗೆ ಶಾಸಕ ಜಿ.ಟಿ.ದೇವೇಗೌಡ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಮೇಲೆ ಯಾರೂ ಕೂಡ ರಾಜಕೀಯವಾಗಿ ದೂರು ಕೊಟ್ಟಿಲ್ಲ. ನನ್ನ ಮೇಲೆ ಯಾವ ಕೇಸ್ ಇದೆ ತೋರಿಸಲಿ. ಸಿದ್ದರಾಮಯ್ಯ ಸೇಡು ತೀರಿಸಿಕೊಳ್ಳಲಿಕ್ಕೆ ರಾಜಕೀಯ ಮಾಡಿದ್ದಾರೆ. ನನ್ನನ್ನು ಸೋಲಿಸಲಿಕ್ಕೆ ಪ್ರಯತ್ನ ಮಾಡಿದ್ದಾರೆ. ಆದರೆ ಸುಳ್ಳು ಕೇಸ್ ಹಾಕಿಸುವ ಕೆಲಸವನ್ನು ಸಿದ್ದರಾಮಯ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ನಾನು ಸಾಧ್ಯವಾದಷ್ಟು ಮಾಧ್ಯಮಗಳಿಂದ ದೂರವಿದ್ದೇನೆ. ಏನು ಮಾತನಾಡಬೇಕು, ಏನು ಮಾತನಾಡಬಾರದು ಎಂದು ನನ್ನ ಮನಸ್ಸಿನಲ್ಲಿ ತೀರ್ಮಾನ ಮಾಡಿದ್ದೀನಿ. ಆದರೆ ಯಾಕೆ ನನ್ನ ಹೆಸರನ್ನೇ ಪದೇ ಪದೇ ಮಾತನಾಡುತ್ತಿದ್ದಾರೆ ಗೊತ್ತಿಲ್ಲ. ಚಾಮುಂಡೇಶ್ವರಿ ಕ್ಷೇತ್ರದ ಜನರ ಸಮಸ್ಯೆ ಆಲಿಸೋದು. ಅಭಿವೃದ್ಧಿ ಮಾಡೋದನ್ನು ಬಿಟ್ಟು ನನಗೆ ಬೇರೆ ಏನೂ ಕೆಲಸ ಇಲ್ಲ ಎಂದರು.
ಇನ್ನು ಯಾವ ಅರ್ಥದಲ್ಲಿ ರೇವಣ್ಣ ಈ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ನನ್ನನ್ನು ಅರೆಸ್ಟ್ ಮಾಡ್ತಾರೆ ಬಿಡಿಸಿಕೊಡಿ ಎಂದು ಯಾರ ಬಳಿಯೂ ಕೂಡ ಕೇಳಿಲ್ಲ. ರೇವಣ್ಣನವರೇ ದಯವಿಟ್ಟು ಕ್ಷಮಿಸಿ. ನನ್ನನ್ನು ಯಾರೂ ಕೂಡ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ರೇವಣ್ಣರನ್ನೇ ಕೇಳುತ್ತೇನೆ ಎಂದು ಕಿಡಿಕಾರಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…