Mysore
23
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ಮೈಸೂರು: ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಜನತಾದರ್ಶನ

cm siddaramiah public meeting

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸದಲ್ಲಿ ಜನತಾ ದರ್ಶನ ನಡೆಸಿದರು.

ನಿವಾಸದಲ್ಲಿ ಸಾಂಕೇತಿಕ ಜನತಾ ದರ್ಶನ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ನಿರುದ್ಯೋಗ, ಅನಾರೋಗ್ಯ, ಗ್ರಾಮದ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು.

ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸುವುದಾಗಿ ಸಾರ್ವಜನಿಕರಿಗೆ ಭರವಸೆ ನೀಡಿದರು. ಸಿಎಂ ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್ ಸೇರಿದಂತೆ ಮುಖಂಡರು ಸಾಥ್ ನೀಡಿದರು.

Tags:
error: Content is protected !!