ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು.
ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಬೃಹತ್ ಕಾರ್ಯಕ್ರಮ ನಡೆಸುತ್ತಿದೆ.
ಮೈಸೂರು, ಬೆಳಗಾವಿ, ಮಂಗಳೂರು, ಕಲಬುರ್ಗಿಯಲ್ಲಿ ಆಯಾಯ ಪ್ರಾದೇಶಿಕತೆಯ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಕನ್ನಡ ಸುವರ್ಣ ರಥ ಅಭಿಯಾನ ನಡೆಯುತ್ತಿದೆ.
ಸುವರ್ಣ ಸಂಭ್ರಮ ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಸಂಚರಿಸುತ್ತಿರುವ ಸುವರ್ಣ ರಥ ಅಂದು ರಾಜಧಾನಿ ತಲುಪಲಿದೆ. ಈ ಬಾರಿ ವಿವಿಧ ಕ್ಷೇತ್ರರದ 50 ಸಾಧಕರನ್ನು ಸನ್ಮಾನಿಸಲಾಗುತ್ತದೆ. 5 ಬೃಹತ್ ಸಂಪುಟಗಳು ಲೋಕಾರ್ಪಣೆಯಾಗಲಿವೆ.
ಈ ಹಿನ್ನೆಲೆಯಲ್ಲಿಂದು ಮೈಸೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಕೆ.ಹರೀಶ್ ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…