ಮೈಸೂರು ನಗರ

ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು.

ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಬೃಹತ್‌ ಕಾರ್ಯಕ್ರಮ ನಡೆಸುತ್ತಿದೆ.

ಮೈಸೂರು, ಬೆಳಗಾವಿ, ಮಂಗಳೂರು, ಕಲಬುರ್ಗಿಯಲ್ಲಿ ಆಯಾಯ ಪ್ರಾದೇಶಿಕತೆಯ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಕನ್ನಡ ಸುವರ್ಣ ರಥ ಅಭಿಯಾನ ನಡೆಯುತ್ತಿದೆ.

ಸುವರ್ಣ ಸಂಭ್ರಮ ನವೆಂಬರ್.‌1ರಂದು ಕನ್ನಡ ರಾಜ್ಯೋತ್ಸವದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಸಂಚರಿಸುತ್ತಿರುವ ಸುವರ್ಣ ರಥ ಅಂದು ರಾಜಧಾನಿ ತಲುಪಲಿದೆ. ಈ ಬಾರಿ ವಿವಿಧ ಕ್ಷೇತ್ರರದ 50 ಸಾಧಕರನ್ನು ಸನ್ಮಾನಿಸಲಾಗುತ್ತದೆ. 5 ಬೃಹತ್‌ ಸಂಪುಟಗಳು ಲೋಕಾರ್ಪಣೆಯಾಗಲಿವೆ.

ಈ ಹಿನ್ನೆಲೆಯಲ್ಲಿಂದು ಮೈಸೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್‌, ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಕೆ.ಹರೀಶ್‌ ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೋನಮ್‌ ವಾಂಗ್ಚುಕ್‌ಗೆ ಅಗತ್ಯ ವೈದ್ಯಕೀಯ ನೆರವು ನೀಡುತ್ತೇವೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ

ನವದೆಹಲಿ: ಜಂತರ್‌ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸೋನಮ್‌ ವಾಂಗ್ಚುಕ್‌ ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ…

7 hours ago

ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದು

ನವದೆಹಲಿ: ಉಪಸಭಾಪತಿ ಪ್ರಾಣೇಶ್‌ ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂಕೋರ್ಟ್‌ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ…

7 hours ago

ಮಾಜಿ ಪ್ರಧಾನಿ ಎಚ್‌ಡಿಡಿ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿರ: ವೈದ್ಯರ ಮಾಹಿತಿ

ಬೆಂಗಳೂರು: ದೇವೇಗೌಡರ ಪತ್ನಿ ಚೆನ್ನಮ್ಮ ಆರಾಮಾಗಿದ್ದಾರೆ ಎಂದು ಮಣಿಪಾಲ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಚೆನ್ನಮ್ಮ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ…

7 hours ago

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ ಫುಟ್‌ಪಾತ್‌ನಲ್ಲಿ ಕಟ್ಟಿಕೊಂಡಿದ್ದ ಅನ್ನದ ಬಟ್ಟಲು; ನಿರುದ್ಯೋಗ ನಿವಾರಣಾತೊಟ್ಟಿಲು ಶಕ್ತಿ ತುಂಬಲಿ ಮತ್ತೊಂದು ಕಟ್ಟಲು ಎಲ್ಲರ ಜೀವನ ಜಾಲವೇ ಮುಂದಕೂ…

16 hours ago

ಓದುಗರ ಪತ್ರ: ಕೆಪಿಎಸ್‌ಸಿ ಹಗರಣ; ಯುವಜನರ ಭವಿಷ್ಯಕ್ಕೆ ಕೊಳ್ಳಿ

ಕೆಪಿಎಸ್‌ಸಿ ಭ್ರಷ್ಟಾಚಾರದ ಕುರಿತು ಇತ್ತೀಚಿನ ಸುದ್ದಿ ಕಣ್ಣು ತೆರೆಸುವಂತಿದೆ. ದಕ್ಷ ಅಧಿಕಾರಿಗಳನ್ನು ಆರಿಸಬೇಕಾದ ಸಾಂವಿಧಾನಿಕ ಸಂಸ್ಥೆಯ ಅಧ್ಯಕ್ಷರೇ ಅಮಾನತ್ತುಗೊಂಡಿರುವುದು ಇಡೀ…

16 hours ago

ಓದುಗರ ಪತ್ರ: ಯಕ್ಷಪ್ರಶ್ನೆ

ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ…

16 hours ago