ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರು ಅರಮನೆ ಮೈದಾನದಲ್ಲಿ ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿದರು.
ಕರ್ನಾಟಕ ಏಕೀಕರಣ 50ರ ಸುವರ್ಣ ಸಂಭ್ರಮದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಬೃಹತ್ ಕಾರ್ಯಕ್ರಮ ನಡೆಸುತ್ತಿದೆ.
ಮೈಸೂರು, ಬೆಳಗಾವಿ, ಮಂಗಳೂರು, ಕಲಬುರ್ಗಿಯಲ್ಲಿ ಆಯಾಯ ಪ್ರಾದೇಶಿಕತೆಯ ವೈಶಿಷ್ಟ್ಯಗಳನ್ನು ಒಳಗೊಂಡಂತೆ ಕನ್ನಡ ಸುವರ್ಣ ರಥ ಅಭಿಯಾನ ನಡೆಯುತ್ತಿದೆ.
ಸುವರ್ಣ ಸಂಭ್ರಮ ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದೊಂದಿಗೆ ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ. ಈಗಾಗಲೇ ರಾಜ್ಯದಲ್ಲಿ ಸಂಚರಿಸುತ್ತಿರುವ ಸುವರ್ಣ ರಥ ಅಂದು ರಾಜಧಾನಿ ತಲುಪಲಿದೆ. ಈ ಬಾರಿ ವಿವಿಧ ಕ್ಷೇತ್ರರದ 50 ಸಾಧಕರನ್ನು ಸನ್ಮಾನಿಸಲಾಗುತ್ತದೆ. 5 ಬೃಹತ್ ಸಂಪುಟಗಳು ಲೋಕಾರ್ಪಣೆಯಾಗಲಿವೆ.
ಈ ಹಿನ್ನೆಲೆಯಲ್ಲಿಂದು ಮೈಸೂರಿನ ಅರಮನೆ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಸುವರ್ಣ ಸಂಭ್ರಮ ರಥಕ್ಕೆ ಚಾಲನೆ ನೀಡಿ, ಅಭಿಯಾನ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್, ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕ ಕೆ.ಹರೀಶ್ ಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…