Mysore
21
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಬಿಜೆಪಿ ಮುಖಂಡ ರಘು ಕೌಟಿಲ್ಯ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಘು ಕೌಟಿಲ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ. ರಾಮಕೃಷ್ಣ ಹೆಗಡೆ ನನ್ನ ಆದರ್ಶ ವ್ಯಕ್ತಿ ಎನ್ನುತ್ತಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.

ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ಇಂದು ಜಯ ಸಿಕ್ಕಿದೆ. ನೀವು ಸದನದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ್ರೆ ನಾವು ಪಾದಯಾತ್ರೆ ಮಾಡುತ್ತಿರಲಿಲ್ಲ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಮಕೃಷ್ಣ ಹೆಗಡೆ ಅವರು ಒಂದೇ ಒಂದು ಟೆಲಿಫೋನ್‌ ಪ್ರಕರಣದಲ್ಲಿ ರಾಜೀನಾಮೆ ನೀಡಿದರು. ಆದ್ದರಿಂದ ಸಿದ್ದರಾಮಯ್ಯ ಅವರೂ ಸಹ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ನಿರ್ದೋಷಿ ಎಂದು ಸಾಬೀತುಪಡಿಸಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

Tags:
error: Content is protected !!