ಮೈಸೂರು ನಗರ

ಮುಡಾ ಹಗರಣ: ತಪ್ಪು ಮಾಡಿದವರ ಮೇಲೆ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಿನೇಶ್‌ ಅವರನ್ನು ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ ಎಂದರು.

ಅವರು ಇಂದು (ಸೆಪ್ಟೆಂಬರ್ 03) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು ಎಂದರು.

2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.

ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ: ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿಯ ದರ್ಶನ ಮಾಡುತ್ತಿದ್ದೇನೆ. ವಿರೋಧ ಪಕ್ಷದವರಿಗೆ ಸುಳ್ಳು ಹೇಳಿರುವುದು ರುಜುವಾತಾಗದೆ ಹೋದರೆ ಕಷ್ಟವಾಗುತ್ತದೆ ಎಂದು ಯೋಚಿಸುತ್ತಿದ್ದಾರೆ. ನಾನು ಸುಳ್ಳು ಹೇಳಿಲ್ಲ ಹಾಗೂ ತಪ್ಪು ಮಾಡಿಲ್ಲ ಎಂದರು.

ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ: ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಗಳಾಗಿರುತ್ತಾರೆ. ಸಿಎಂ ಒಪ್ಪಿಗೆ ಕೊಟ್ಟರೆ ಮುಖ್ಯಮಂತ್ರಿಯಾಗುವುದಾಗಿ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಮುಖ್ಯಮಂತ್ರಿಯನ್ನು ಶಾಸಕರು, ವರಿಷ್ಠರು ಆಯ್ಕೆ ಮಾಡುತ್ತಾರೆ ಎಂದರು.

ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಸುಧಾಕರ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ ಎಂದರು.

ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ವಿಳಂಬ: ಪರಿಶೀಲನೆ
ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿನಿಂದ ಸಂಬಳ ದೊರೆತಿಲ್ಲದಿರುವ ಬಗ್ಗೆ ಮಾತನಾಡಿ ಸಂಬಳ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago