ಮೈಸೂರು ನಗರ

ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯರನ್ನು ಟಾರ್ಗೆಟ್‌ ಮಾಡಲಾಗುತ್ತಿದೆ: ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮನ್ನು ಆಯ್ಕೆ ಮಾಡೋದು, ಅಧಿಕಾರದಿಂದ ಕೆಳಗೆ ಇಳಿಸೋದು ಜನರ ಅಧಿಕಾರ. ನಾವು ಪ್ರಜಾಪ್ರಭುತ್ವದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಪಕ್ಷಕ್ಕೆ ಜನ ಬಹುಮತ ಕೊಟ್ಟಿದ್ದಾರೆ ಎಂದರು.

ಇನ್ನು ಮೊದಲಿನಿಂದಲೂ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್‌ ಮಾಡುತ್ತಾ ಬಂದಿದ್ದಾರೆ. ಸುಳ್ಳು ಆರೋಪಗಳನ್ನು ಮಾಡಿ ಜನರಲ್ಲಿ ಅಪನಂಬಿಕೆ ಸೃಷ್ಟಿ ಮಾಡಲು ಬಿಜೆಪಿ ಹಾಗೂ ಜೆಡಿಎಸ್‌ನವರು ಹೊರಟಿದ್ದಾರೆ ಎಂದು ಟಾಂಗ್‌ ಕೊಟ್ಟರು.

ಇನ್ನು ನಾಳೆ ನಡೆಯುವ ಸಮಾವೇಶದ ಬಗ್ಗೆ ಮಾತನಾಡಿದ ಅವರು, ನಾಳಿನ ಸಮಾವೇಶಕ್ಕೆ ಹೆಚ್ಚಿನ ಜನ ಸೇರಿಸುವ ಪ್ರಯತ್ನ ಮಾಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ನಿರೀಕ್ಷೆಯಿದೆ ಎಂದರು.

ನಾಳೆ ನಡೆಯುವ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರದಲ್ಲಿ ಆಗಿದ್ದ ಹಗರಣಗಳನ್ನೆಲ್ಲಾ ಎಳೆ ಎಳೆಯಾಗಿ ಬಿಚ್ಚಿಡುತ್ತಾರೆ. ಆ ಎಲ್ಲಾ ಹಗರಣಗಳಿಗೂ ಪ್ರತಿಪಕ್ಷ ಬಿಜೆಪಿ ಉತ್ತರ  ಕೊಡಲಿ ಎಂದು ಸವಾಲು ಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

1 hour ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

1 hour ago

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

15 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

15 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

16 hours ago