ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 11, 12 ಮತ್ತು 13 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಅಕ್ಟೋಬರ್ 11 ರಂದು ಬೆಳಿಗ್ಗೆ 10.25 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.
ಅಕ್ಟೋಬರ್ 12 ರಂದು ಬೆಳಿಗ್ಗೆ 10 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಸುತ್ತೂರು ಮಠಕ್ಕೆ ಭೇಟಿ ನೀಡುವರು.
ಅಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಅರಮನೆ ಆವರಣದ ಬಲರಾಮ ದ್ವಾರದಲ್ಲಿ ಆವರಣದಲ್ಲಿ ಆಯೋಜಿಸಲಾಗಿರುವ ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಂಡು ಸಂಜೆ 4 ಗಂಟೆಯಿoದ 4.30 ಗಂಟೆಯವರೆಗೆ ಅರಮನೆ ಒಳಾವರಣದಲ್ಲಿ ಏರ್ಪಡಿಸಲಾಗಿರುವ ವಿಜಯದಶಮಿ ಮೆರವಣಿಗೆ ಉದ್ಘಾಟನೆ ಮಾಡಲಿದ್ದಾರೆ. ರಾತ್ರಿ 7 ಗಂಟೆಗೆ ಬನ್ನಿಮಂಟಪ ಮೈದಾನದಲ್ಲಿ ಆಯೋಜಿಸಿರುವ ಪಂಜಿನ ಕವಾಯತು( ಟಾರ್ಚ್ ಲೈಟ್ ಪರೇಡ್) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 13 ರಂದು ಬೆಳಿಗ್ಗೆ 11 ಕ್ಕೆ ಕಡಕೋಳದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನಿಂದ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…