ಮೈಸೂರು ನಗರ

ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್‌ ಕೊಡುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಮೋದಿ ಸರ್ಕಾರಕ್ಕೆ ಝೀರೋ ಮಾರ್ಕ್ಸ್‌ ಕೊಡುತ್ತೇನೆ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮೋದಿ ಅವರು ಕೇವಲ ಪ್ರಚಾರದಿಂದ ಅಧಿಕಾರಕ್ಕೆ ಬಂದಿದ್ದು. ಪ್ರತಿ ವರ್ಷ 2 ಕೋಟಿ ಉದ್ಯೋಗ ಕೊಡುತ್ತೇವೆ ಎಂದು ಹೇಳಿದ್ದರು. ಅದು ಏನ್ ಆಯ್ತು. ರೈತರ ಸಮಸ್ಯೆಗಳನ್ನು ಆಲಿಸುತ್ತೇನೆ ಎಂದು ಹೇಳಿದ್ದರು. ರೈತರೆಲ್ಲ ದೆಹಲಿಗೆ ಹೋಗಿ ಯಾಕೆ ಚಳುವಳಿ ಮಾಡಿದ್ರು. ಮೋದಿ ಅವರು ಏನು ಹೇಳಿದ್ರು ಅದನ್ನೆಲ್ಲ ಮಾಡಿಲ್ಲ. 11 ವರ್ಷ ತುಂಬಿಸಿದ್ದಾರೆ ಅಷ್ಟೇ. ಪ್ರಚಾರದಿಂದ ಸುಳ್ಳು ಹೇಳಿಕೆ ನೀಡುತ್ತಾರೆ. ಗ್ಯಾರಂಟಿ ಘೋಷಣೆ ಮಾಡಿದಾಗ ನಮ್ಮನ್ನು ವಿರೋಧ ಮಾಡಿದ್ರು. ಆಮೇಲೆ ನಮ್ಮನ್ನು ಕಾಪಿ ಮಾಡಿದ್ರು. ಮಧ್ಯಪ್ರದೇಶ, ದೆಹಲಿ, ಯುಪಿ ಎಲ್ಲಾ ಕಡೆ ನಮ್ಮ ಗ್ಯಾರಂಟಿ ಕಾಪಿ ಆಯ್ತು ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದರು.

ಇನ್ನು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಆದರೂ ಬಿಜೆಪಿಯವರು ಏನು ಪ್ರಶ್ನೆ ಮಾಡುತ್ತಿಲ್ಲ. ಮೋದಿ ಸರ್ಕಾರದಲ್ಲಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. ಅದನ್ನ ಕೇಳಿ ಅಂದ್ರೆ ಬಿಜೆಪಿಯವರು ಕೆಲಸಕ್ಕೆ ಬಾರದ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

2 mins ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

24 mins ago

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

54 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

1 hour ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago