ಮೈಸೂರು: ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನ ಸಿನಿಮಾ ವೀಕ್ಷಣೆ ಮಾಡಿ ಖುಷಿಪಟ್ಟಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಅನ್ನ ಸಿನಿಮಾ ವೀಕ್ಷಣೆ ಮಾಡಿದ್ದೆ. ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು. ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನು ಬಾಧಿಸದಿರಲಿ ಎಂದು 2023ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ. ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನಿಮಾ ಬೆಳಕು ಚೆಲ್ಲಿದೆ.
ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…