ಮೈಸೂರು: ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅನ್ನ ಸಿನಿಮಾ ವೀಕ್ಷಣೆ ಮಾಡಿ ಖುಷಿಪಟ್ಟಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ನಿನ್ನೆ ಮೈಸೂರಿನ ಡಿಆರ್ಸಿ ಚಿತ್ರಮಂದಿರದಲ್ಲಿ ಅನ್ನ ಸಿನಿಮಾ ವೀಕ್ಷಣೆ ಮಾಡಿದ್ದೆ. ಅನ್ನ ಉಣ್ಣಲು ನನ್ನೂರಿನ ಜನ ಹಬ್ಬಕ್ಕಾಗಿ ಕಾಯುತ್ತಿದ್ದ ನನ್ನ ಬಾಲ್ಯದ ದಿನಗಳು ಈ ಸಿನಿಮಾದ ಕಥೆಯ ಮೂಲಕ ಕಣ್ಣೆದುರು ಬಂದವು. ನಾನು ಕಂಡ ಹಸಿವು, ಬಡತನಗಳು ನಾಡಿನ ಯಾರೊಬ್ಬರನ್ನು ಬಾಧಿಸದಿರಲಿ ಎಂದು 2023ರಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಕೊಟ್ಟಿದ್ದೆ. ಚಿತ್ರದ ಕೊನೆಯಲ್ಲಿ ಈ ಯೋಜನೆಯ ಮಹತ್ವದ ಬಗ್ಗೆಯೂ ಸಿನಿಮಾ ಬೆಳಕು ಚೆಲ್ಲಿದೆ.
ಮನೋರಂಜನೆಯ ಜೊತೆಗೆ ಹಸಿವಿನ ಎದುರು ಬೇರೆಲ್ಲಾ ಸಂಬಂಧಗಳು ಹೇಗೆ ನಗಣ್ಯವೆನಿಸುತ್ತವೆ ಎಂಬ ಸಂದೇಶವನ್ನು ಒಳಗೊಂಡ ಈ ಚಿತ್ರ ಅದ್ಭುತವಾಗಿ ಮೂಡಿಬಂದಿದೆ. ಚಿತ್ರತಂಡಕ್ಕೆ ಶುಭವಾಗಲಿ, ಚಿತ್ರ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…