ಮೈಸೂರು ನಗರ

ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ವಿಚಾರ: ಸಿಎಂ ವರ್ತನೆ ವಿರುದ್ಧ ಯದುವೀರ್‌ ಒಡೆಯರ್‌ ಕಿಡಿ

ಮೈಸೂರು: ಪೊಲೀಸ್‌ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೈದ ಕಾರಣ ಪೊಲೀಸ್‌ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸ್‌ ಅಧಿಕಾರಿ ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು.

ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿಯನ್ನು ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನನು ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ಈ ರೀತಿ ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷದ ಆಂತರಿಕ ವಿಚಾರವನ್ನು ಬಹಿರಂಗವಾಗಿ ಮಾತನಾಡುವುದಿಲ್ಲ ಎಂದರು.

ಇನ್ನು ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ಆಂತರಿಕ‌ ವಿಚಾರದ ಬಗ್ಗೆ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಆಂತರಿಕ ಕಚ್ಚಾಟದಿಂದ ಆಡಳಿತ ಯಂತ್ರ ಕುಸಿದಿದೆ. ಪ್ರಾಣಿಗಳ ಸಾವು, ಚಾಮುಂಡಿ ಬೆಟ್ಟದ ನಿರ್ವಹಣೆ ಸೇರಿ ಎಲ್ಲಾ ವಲಯದಲ್ಲಿ ವಿಫಲವಾಗಿದೆ. ಇದೆಲ್ಲಾ ಬಿಟ್ಟು ಸರ್ಕಾರ ಉತ್ತಮ ಆಡಳಿತ ನೀಡುವತ್ತ ಗಮನ ಹರಿಸಬೇಕು ಎಂದರು.

ಇನ್ನು ಚಾಮರಾಜನಗರದಲ್ಲಿ ಹುಲಿಗಳು ಹಾಗೂ ಕೋತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧ ಚಾಮರಾಜನಗರದ ಯಾವುದೇ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ. ಇದೊಂದು ಗಂಭೀರ ಸಮಸ್ಯೆ ಆಗಿದೆ. ಯಾಕೆ ಅವರಿಗೆ ಅರ್ಥ ಆಗುತ್ತಿಲ್ಲ ಎಂಬುದೇ ಗೊತ್ತಾಗುತ್ತಿಲ್ಲ. ಈ ವಿಚಾರದಲ್ಲಿ ನಾನು ಮಾತ್ರವೇ ಧ್ವನಿ ಎತ್ತುವ ಕೆಲಸ ಆಗುತ್ತಿದೆ. ಅರಣ್ಯ ರಾತ್ರಿ ಸಂಚಾರದ ಬಗ್ಗೆ ಕೂಡ ಸದನದಲ್ಲಿ ನಾನೊಬ್ಬನೇ ದನಿ ಎತ್ತುತ್ತಿದ್ದೇನೆ. ಚಾಮರಾಜನಗರ ಜನಪ್ರತಿನಿಧಿಗಳು ಇನ್ನಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಬೇಕು. ಅರಣ್ಯ ಅಧಿಕಾರಿಗಳು ಸಭೆ ಕರೆದಾಗಲೂ ಯಾರೂ ಬರುವುದಿಲ್ಲ. ಅರಣ್ಯದ ಬಗ್ಗೆ ನಮಗೆ ಏನೂ ಗೊತ್ತಿಲ್ಲ ಎಂದುಕೊಂಡಿದ್ದಾರೆ. ಆದರೆ ನಮಗೆ ಎಲ್ಲ ಗೊತ್ತಿದೆ. ಚಾಮರಾಜನಗರ ಶೇಕಡಾ 50ಕ್ಕೂ ಹೆಚ್ಚು ಅರಣ್ಯ ಹೊಂದಿದೆ. ಅದನ್ನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

37 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

6 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

7 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

9 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

12 hours ago