ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಜಿ.ಟಿ.ದೇವೇಗೌಡ

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌ ಬೀಸಿದ್ದಾರೆ.

ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಫ್‌ಐಆರ್‌ ಅದ ತಕ್ಷಣ ವಿರೋಧ ಪಕ್ಷದವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು. ಈಗ ನೋಡಿ ಲೋಕಾಯುಕ್ತದಿಂದ ಕ್ಲೀನ್‌ಚಿಟ್‌ ಸಿಕ್ಕಿದೆ. ಎಫ್‌ಐಆರ್‌ ಅದ ತಕ್ಷಣ ರಾಜೀನಾಮೆ ಕೇಲುವುದು ತಪ್ಪು ಎಂದು ಹೇಳಿದೆ. ಈಗ ಸತ್ಯ ಗೊತ್ತಾಗಿರಬಹುದು ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಮ್ಮ ಅವರ ಪಾತ್ರದ ಬಗ್ಗೆ ಪ್ರತಿಕ್ರಿಯಿಸಿ, ಪಾರ್ವತಮ್ಮ ಅವರು ಯಾವತ್ತೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ, ವ್ಯವಹಾರ ಮಾಡಿದವರೂ ಅಲ್ಲ. ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಮುಂದುವರಿದು ಮಾತನಾಡುತ್ತಾ, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಉತ್ತಮವಾಗಿ ಕೆಲಸ ಮಾಡಿದೆ. ಲೋಕಾಯುಕ್ತರ ಮೇಲೆ ಯಾರು ಪ್ರಭಾವ ಬೀರುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.

ಇನ್ನು ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವುದರ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ. ಅದರೆ, ಅದು ಯಾವಾಗ ಅಂತ ಗೊತ್ತಿಲ್ಲ. ಡಿಕೆ ಶಿವಕುಮಾರ್‌ ಸಿಎಂ ಆಗಬೇಕು ಅಂದರೆ ಸಿದ್ದರಾಮಯ್ಯ ಅವರ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago