ಮೈಸೂರು ನಗರ

ಸಿಎಂ ಸಿದ್ದರಾಮಯ್ಯ ಭವಿಷ್ಯ, ಅದೃಷ್ಟ ಗಟ್ಟಿಯಾಗಿದೆ: ಜಿ.ಟಿ.ದೇವೇಗೌಡ

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌ ಬೀಸಿದ್ದಾರೆ.

ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಫ್‌ಐಆರ್‌ ಅದ ತಕ್ಷಣ ವಿರೋಧ ಪಕ್ಷದವರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು. ಈಗ ನೋಡಿ ಲೋಕಾಯುಕ್ತದಿಂದ ಕ್ಲೀನ್‌ಚಿಟ್‌ ಸಿಕ್ಕಿದೆ. ಎಫ್‌ಐಆರ್‌ ಅದ ತಕ್ಷಣ ರಾಜೀನಾಮೆ ಕೇಲುವುದು ತಪ್ಪು ಎಂದು ಹೇಳಿದೆ. ಈಗ ಸತ್ಯ ಗೊತ್ತಾಗಿರಬಹುದು ಎಂದು ಹೇಳಿದರು.

ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಮ್ಮ ಅವರ ಪಾತ್ರದ ಬಗ್ಗೆ ಪ್ರತಿಕ್ರಿಯಿಸಿ, ಪಾರ್ವತಮ್ಮ ಅವರು ಯಾವತ್ತೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ, ವ್ಯವಹಾರ ಮಾಡಿದವರೂ ಅಲ್ಲ. ಅವರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ಮುಂದುವರಿದು ಮಾತನಾಡುತ್ತಾ, ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಉತ್ತಮವಾಗಿ ಕೆಲಸ ಮಾಡಿದೆ. ಲೋಕಾಯುಕ್ತರ ಮೇಲೆ ಯಾರು ಪ್ರಭಾವ ಬೀರುವುದಕ್ಕೆ ಆಗುವುದಿಲ್ಲ ಎಂದು ಹೇಳಿದರು.

ಇನ್ನು ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುವುದರ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಡಿಕೆ ಶಿವಕುಮಾರ್‌ ಅವರು ಒಂದಲ್ಲ ಒಂದು ದಿನ ಮುಖ್ಯಮಂತ್ರಿ ಆಗುತ್ತಾರೆ. ಅದರೆ, ಅದು ಯಾವಾಗ ಅಂತ ಗೊತ್ತಿಲ್ಲ. ಡಿಕೆ ಶಿವಕುಮಾರ್‌ ಸಿಎಂ ಆಗಬೇಕು ಅಂದರೆ ಸಿದ್ದರಾಮಯ್ಯ ಅವರ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ ಆಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

3 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

3 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

3 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

13 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago