ಮೈಸೂರು ನಗರ

ಕೋ- ಆಪರೇಟಿವ್ ಬ್ಯಾಂಕ್‌ ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ – ಎಂ.ಕೆ.ಸೋಮಶೇಖರ್

 

ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಫ್ರಾಂಚೈಸಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ನೀತಿ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಪಾರದರ್ಶಕತೆ ಮತ್ತು ಗ್ರಾಹಕ ಸ್ನೇಹಿಯಾಗಿ ಕೆಲಸ ನಿರ್ವಹಿಸಿದರೆ ಹೆಚ್ಚು ಷೇರುದಾರರು ಹಾಗೂ ಸದಸ್ಯರುಗಳನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕೋ-ಆಪರೇಟಿವ್‌ ಬ್ಯಾಂಕ್‌ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ ಎಂದರು.

ಸಹಕಾರ ಸಂಘಗಳಿಗೆ ಸದಸ್ಯರು ಹೆಚ್ಚಾದಂತೆ ಬ್ಯಾಂಕಿನ ಆದಾಯ ಸಹ ಹೆಚ್ಚಾಗುತ್ತದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಸಾಲವನ್ನು ನೀಡಬಹುದು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನೆಡೆಯಲು ಅವಕಾಶ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಆಡಳಿತ ಮಂಡಳಿಯವರು ಸಹ ಪಾರದರ್ಶಕತೆಯಿಂದ ಇದ್ದರೆ ಬ್ಯಾಂಕ್ ಸಹ ಬೆಳೆಯುತ್ತದೆ. ಗ್ರಾಹಕರಿಗೂ ಹೆಚ್ಚು ಅನುಕೂಲಗಳು ಸಿಗುತ್ತದೆ. ಪ್ರಗತಿ ಕೊ-ಆಪರೇಟಿವ್ ಬ್ಯಾಂಕ್ ಸಹ ಎತ್ತರಕ್ಕೆ ಬೆಳೆಯಲಿ ಹೆಚ್ಚು ಹೆಚ್ಚು ಉಪಶಾಖೆಗಳನ್ನು ತೆರೆದು ವಿಸ್ತಾರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಇದೇ ವೇಳೆ ಶುಭಕೋರಿದರು.

ಈ ಸಂಧರ್ಭದಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ರವಿಕುಮಾರ್, ಉಪಾಧ್ಯಕ್ಷರಾದ ಕೃಷ್ಣಕುಮಾರ್, ನಿರ್ದೇಶಕಿಯವರಾದ ತೇಜಾವತಿ, ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ್(ಪ್ರಮಥಿ), ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಕೃಷ್ಣರಾಜೇಂದ್ರ ಬ್ಯಾಂಕ್ ಅಧ್ಯಕ್ಷರಾದ ಪ್ರತಿಧ್ವನಿ ಪ್ರಸಾದ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ರಮೇಶ್ ರಾವ್, ಮಾಜಿ ಪಾಲಿಕೆ ಸದಸ್ಯರುಗಳಾದ ಎಂ.ಸುನೀಲ್, ಶೋಭಾ ಸುನೀಲ್, ಮುಖಂಡರುಗಳಾದ ರವಿಶಂಕರ್, ಶಂಕರ್, ಯುವ ಮುಖಂಡರಾದ ರಾಕೇಶ್, ವಕೀಲರಾದ ಅಶ್ವಿನಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

20 mins ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

1 hour ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

2 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

2 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

2 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

3 hours ago