ಮೈಸೂರು ನಗರ

ಕೋ- ಆಪರೇಟಿವ್ ಬ್ಯಾಂಕ್‌ ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ – ಎಂ.ಕೆ.ಸೋಮಶೇಖರ್

 

ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಫ್ರಾಂಚೈಸಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ನೀತಿ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಪಾರದರ್ಶಕತೆ ಮತ್ತು ಗ್ರಾಹಕ ಸ್ನೇಹಿಯಾಗಿ ಕೆಲಸ ನಿರ್ವಹಿಸಿದರೆ ಹೆಚ್ಚು ಷೇರುದಾರರು ಹಾಗೂ ಸದಸ್ಯರುಗಳನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕೋ-ಆಪರೇಟಿವ್‌ ಬ್ಯಾಂಕ್‌ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ ಎಂದರು.

ಸಹಕಾರ ಸಂಘಗಳಿಗೆ ಸದಸ್ಯರು ಹೆಚ್ಚಾದಂತೆ ಬ್ಯಾಂಕಿನ ಆದಾಯ ಸಹ ಹೆಚ್ಚಾಗುತ್ತದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಸಾಲವನ್ನು ನೀಡಬಹುದು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನೆಡೆಯಲು ಅವಕಾಶ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಆಡಳಿತ ಮಂಡಳಿಯವರು ಸಹ ಪಾರದರ್ಶಕತೆಯಿಂದ ಇದ್ದರೆ ಬ್ಯಾಂಕ್ ಸಹ ಬೆಳೆಯುತ್ತದೆ. ಗ್ರಾಹಕರಿಗೂ ಹೆಚ್ಚು ಅನುಕೂಲಗಳು ಸಿಗುತ್ತದೆ. ಪ್ರಗತಿ ಕೊ-ಆಪರೇಟಿವ್ ಬ್ಯಾಂಕ್ ಸಹ ಎತ್ತರಕ್ಕೆ ಬೆಳೆಯಲಿ ಹೆಚ್ಚು ಹೆಚ್ಚು ಉಪಶಾಖೆಗಳನ್ನು ತೆರೆದು ವಿಸ್ತಾರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಇದೇ ವೇಳೆ ಶುಭಕೋರಿದರು.

ಈ ಸಂಧರ್ಭದಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ರವಿಕುಮಾರ್, ಉಪಾಧ್ಯಕ್ಷರಾದ ಕೃಷ್ಣಕುಮಾರ್, ನಿರ್ದೇಶಕಿಯವರಾದ ತೇಜಾವತಿ, ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ್(ಪ್ರಮಥಿ), ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಕೃಷ್ಣರಾಜೇಂದ್ರ ಬ್ಯಾಂಕ್ ಅಧ್ಯಕ್ಷರಾದ ಪ್ರತಿಧ್ವನಿ ಪ್ರಸಾದ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ರಮೇಶ್ ರಾವ್, ಮಾಜಿ ಪಾಲಿಕೆ ಸದಸ್ಯರುಗಳಾದ ಎಂ.ಸುನೀಲ್, ಶೋಭಾ ಸುನೀಲ್, ಮುಖಂಡರುಗಳಾದ ರವಿಶಂಕರ್, ಶಂಕರ್, ಯುವ ಮುಖಂಡರಾದ ರಾಕೇಶ್, ವಕೀಲರಾದ ಅಶ್ವಿನಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago