ಮೈಸೂರು ನಗರ

ಕೋ- ಆಪರೇಟಿವ್ ಬ್ಯಾಂಕ್‌ ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ – ಎಂ.ಕೆ.ಸೋಮಶೇಖರ್

 

ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಫ್ರಾಂಚೈಸಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ನೀತಿ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಪಾರದರ್ಶಕತೆ ಮತ್ತು ಗ್ರಾಹಕ ಸ್ನೇಹಿಯಾಗಿ ಕೆಲಸ ನಿರ್ವಹಿಸಿದರೆ ಹೆಚ್ಚು ಷೇರುದಾರರು ಹಾಗೂ ಸದಸ್ಯರುಗಳನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕೋ-ಆಪರೇಟಿವ್‌ ಬ್ಯಾಂಕ್‌ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ ಎಂದರು.

ಸಹಕಾರ ಸಂಘಗಳಿಗೆ ಸದಸ್ಯರು ಹೆಚ್ಚಾದಂತೆ ಬ್ಯಾಂಕಿನ ಆದಾಯ ಸಹ ಹೆಚ್ಚಾಗುತ್ತದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಸಾಲವನ್ನು ನೀಡಬಹುದು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನೆಡೆಯಲು ಅವಕಾಶ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಆಡಳಿತ ಮಂಡಳಿಯವರು ಸಹ ಪಾರದರ್ಶಕತೆಯಿಂದ ಇದ್ದರೆ ಬ್ಯಾಂಕ್ ಸಹ ಬೆಳೆಯುತ್ತದೆ. ಗ್ರಾಹಕರಿಗೂ ಹೆಚ್ಚು ಅನುಕೂಲಗಳು ಸಿಗುತ್ತದೆ. ಪ್ರಗತಿ ಕೊ-ಆಪರೇಟಿವ್ ಬ್ಯಾಂಕ್ ಸಹ ಎತ್ತರಕ್ಕೆ ಬೆಳೆಯಲಿ ಹೆಚ್ಚು ಹೆಚ್ಚು ಉಪಶಾಖೆಗಳನ್ನು ತೆರೆದು ವಿಸ್ತಾರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಇದೇ ವೇಳೆ ಶುಭಕೋರಿದರು.

ಈ ಸಂಧರ್ಭದಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ರವಿಕುಮಾರ್, ಉಪಾಧ್ಯಕ್ಷರಾದ ಕೃಷ್ಣಕುಮಾರ್, ನಿರ್ದೇಶಕಿಯವರಾದ ತೇಜಾವತಿ, ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ್(ಪ್ರಮಥಿ), ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಕೃಷ್ಣರಾಜೇಂದ್ರ ಬ್ಯಾಂಕ್ ಅಧ್ಯಕ್ಷರಾದ ಪ್ರತಿಧ್ವನಿ ಪ್ರಸಾದ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ರಮೇಶ್ ರಾವ್, ಮಾಜಿ ಪಾಲಿಕೆ ಸದಸ್ಯರುಗಳಾದ ಎಂ.ಸುನೀಲ್, ಶೋಭಾ ಸುನೀಲ್, ಮುಖಂಡರುಗಳಾದ ರವಿಶಂಕರ್, ಶಂಕರ್, ಯುವ ಮುಖಂಡರಾದ ರಾಕೇಶ್, ವಕೀಲರಾದ ಅಶ್ವಿನಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

19 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago