ಮೈಸೂರು ನಗರ

ಕೋ- ಆಪರೇಟಿವ್ ಬ್ಯಾಂಕ್‌ ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ – ಎಂ.ಕೆ.ಸೋಮಶೇಖರ್

 

ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್‌ ಅಭಿಪ್ರಾಯಪಟ್ಟರು.

ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಫ್ರಾಂಚೈಸಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಹಕಾರ ಸಂಘಗಳ ನೀತಿ ನಿಯಮಗಳನ್ನು ಚೆನ್ನಾಗಿ ತಿಳಿದುಕೊಂಡು ಪಾರದರ್ಶಕತೆ ಮತ್ತು ಗ್ರಾಹಕ ಸ್ನೇಹಿಯಾಗಿ ಕೆಲಸ ನಿರ್ವಹಿಸಿದರೆ ಹೆಚ್ಚು ಷೇರುದಾರರು ಹಾಗೂ ಸದಸ್ಯರುಗಳನ್ನು ಆಕರ್ಷಿಸಬಹುದು. ಈ ನಿಟ್ಟಿನಲ್ಲಿ ಕೋ-ಆಪರೇಟಿವ್‌ ಬ್ಯಾಂಕ್‌ಗಳು ಪಾರದರ್ಶಕ ಮತ್ತು ಗ್ರಾಹಕ ಸ್ನೇಹಿಯಾಗಿರಲಿ ಎಂದರು.

ಸಹಕಾರ ಸಂಘಗಳಿಗೆ ಸದಸ್ಯರು ಹೆಚ್ಚಾದಂತೆ ಬ್ಯಾಂಕಿನ ಆದಾಯ ಸಹ ಹೆಚ್ಚಾಗುತ್ತದೆ. ಇದರಿಂದ ಗ್ರಾಹಕರಿಗೆ ಹೆಚ್ಚು ಸಾಲವನ್ನು ನೀಡಬಹುದು. ಆರ್ಥಿಕ ಚಟುವಟಿಕೆಗಳು ಹೆಚ್ಚಾಗಿ ನೆಡೆಯಲು ಅವಕಾಶ ಸೃಷ್ಟಿಯಾಗುತ್ತದೆ ಎಂದು ಹೇಳಿದರು.

ಆಡಳಿತ ಮಂಡಳಿಯವರು ಸಹ ಪಾರದರ್ಶಕತೆಯಿಂದ ಇದ್ದರೆ ಬ್ಯಾಂಕ್ ಸಹ ಬೆಳೆಯುತ್ತದೆ. ಗ್ರಾಹಕರಿಗೂ ಹೆಚ್ಚು ಅನುಕೂಲಗಳು ಸಿಗುತ್ತದೆ. ಪ್ರಗತಿ ಕೊ-ಆಪರೇಟಿವ್ ಬ್ಯಾಂಕ್ ಸಹ ಎತ್ತರಕ್ಕೆ ಬೆಳೆಯಲಿ ಹೆಚ್ಚು ಹೆಚ್ಚು ಉಪಶಾಖೆಗಳನ್ನು ತೆರೆದು ವಿಸ್ತಾರವಾಗಿ ಬೆಳೆದು ಸಮಾಜಕ್ಕೆ ಉತ್ತಮ ಸೇವೆ ನೀಡಲಿ ಎಂದು ಇದೇ ವೇಳೆ ಶುಭಕೋರಿದರು.

ಈ ಸಂಧರ್ಭದಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ರವಿಕುಮಾರ್, ಉಪಾಧ್ಯಕ್ಷರಾದ ಕೃಷ್ಣಕುಮಾರ್, ನಿರ್ದೇಶಕಿಯವರಾದ ತೇಜಾವತಿ, ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ್(ಪ್ರಮಥಿ), ಮೈಸೂರು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಲೋಕೇಶ್, ಕೃಷ್ಣರಾಜೇಂದ್ರ ಬ್ಯಾಂಕ್ ಅಧ್ಯಕ್ಷರಾದ ಪ್ರತಿಧ್ವನಿ ಪ್ರಸಾದ್, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷರಾದ ರಮೇಶ್ ರಾವ್, ಮಾಜಿ ಪಾಲಿಕೆ ಸದಸ್ಯರುಗಳಾದ ಎಂ.ಸುನೀಲ್, ಶೋಭಾ ಸುನೀಲ್, ಮುಖಂಡರುಗಳಾದ ರವಿಶಂಕರ್, ಶಂಕರ್, ಯುವ ಮುಖಂಡರಾದ ರಾಕೇಶ್, ವಕೀಲರಾದ ಅಶ್ವಿನಿ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

7 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

7 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

8 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

8 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

8 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

8 hours ago