ಮೈಸೂರು ನಗರ

ತೆಂಗಿನಕಾಯಿ ವ್ಯಾಪಾರಿಗೆ 49.47 ಲಕ್ಷ ವಂಚನೆ ; ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರಿಯಿಂದ ಧೋಖಾ…

ಮೈಸೂರು : ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾಯಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ. ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈನ ಶ್ರೀವತ್ಸನ್ ಎಂಬಾತನೇ ವಂಚಿಸಿರುವ ಉದ್ಯಮಿ. ಪುಟ್ಟಣ್ಣ ಇಂಪೋರ್ಟ್ಸ್ ಅಂಡ್ ಎಕ್ಸ್ಪೋರ್ಟ್ ಎಂಬ ಹೆಸರಲ್ಲಿ ಉದ್ಯಮ ನಡೆಸುತ್ತಿರುವ ಶ್ರೀವತ್ಸನ್ ತಮಿಳುನಾಡಿನ ನಿವಾಸಿ. ಸುಬೇದ್ ಅಗರವಾಲ್ ರವರು ಮೈಸೂರಿನ ಮಂಡಿ ಮೊಹಲ್ಲಾದ ಅಕ್ಬರ್ ರಸ್ತೆಯಲ್ಲಿ ಸುನಿಲ್ ಕುಮಾರ್ ಅಗರವಾಲ್ ಹೆಸರಲ್ಲಿ 15 ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ಮಾಡುತ್ತಿದ್ದಾರೆ. ಮಾರ್ಚ್ ತಿಂಗಳಲ್ಲಿ ಸುಬೇದ್ ಅಗರವಾಲ್ ರನ್ನ ಶ್ರೀವತ್ಸನ್ ಸಂಪರ್ಕಿಸಿ ವ್ಯಾಪಾರ ಕುದುರಿಸಿ ಸುಮಾರು 15 ಲಕ್ಷ ಮೌಲ್ಯದ ತೆಂಗಿನಕಾಯಿ ಖರೀದಿಸಿ 10 ಲಕ್ಷ ನೀಡಿದ್ದಾರೆ. ನಂತರ ಶ್ರೀವತ್ಸನ್ ರವರ ಸೂಚನೆಯಂತೆ ವಿವಿಧೆಡೆಗೆ ತೆಂಗಿನಕಾಯಿ ಲೋಡ್ ಕಳಿಸಿದ್ದಾರೆ. ತಿಂಗಳುಗಳು ಕಳೆದರೂ ತೆಂಗಿನಕಾಯಿ ಹಣ ಬಂದಿಲ್ಲ. ಶ್ರೀವತ್ಸನ್ ರವರಿಗೆ ಸೇರಿದ ನಾಲ್ಕು ಮೊಬೈಲ್ ಗಳು ಸ್ವಿಚ್ ಆಫ್ ಆಗಿದೆ. ಶ್ರೀವತ್ಸನ್ ರಿಂದ ಒಟ್ಟು 49,47,401/- ರೂ ಬಾಕಿ ಬರಬೇಕಿದೆ ಎಂದು ಸುಬೇದ್ ಅಗರವಾಲ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

4 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

4 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

4 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

4 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

4 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

7 hours ago