ಮೈಸೂರು: ಆರು ದಿನಗಳ ಕಾಲ ‘ಬಿಡುಗಡೆ’ ಆಶಯ ಹೊತ್ತು ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.
ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಯ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಛಾಾಯಾ ಚಿತ್ರಗಳ ಪ್ರದರ್ಶನ, ಬೀದಿ ನಾಟಕ ಪ್ರದರ್ಶನದ ಮೂಲಕ ಪ್ರೇಕ್ಷಕ ವರ್ಗಕ್ಕೆ ರಸದೌತಣ ಉಣಬಡಿಸಿತು.
ಪುಸ್ತಕ ಮೇಳ, ದೇಶಿ ತಿನಿಸು ಮೇಳ, ಕರಕುಶಲ ಮೇಳ ಹೀಗೆ ನಾನಾ ಕಾರ್ಯ ಕ್ರಮದ ಮೂಲಕ ಎಲ್ಲಾ ವರ್ಗದ ಜನರನ್ನು ಬೆಸೆಯಿತು. ವನರಂಗ, ಕಲಾಮಂದಿರ, ಕಿರುರಂಗಮಂದಿರ, ಭೂಮಿಗೀತಾ ಸಭಾಂಗಣದಲ್ಲಿ ಕನ್ನಡ, ಹಿಂದಿ, ಮಲೆಯಾಳಂ, ತಮಿಳು ಸೇರಿದಂತೆ ಇತರೆ ಭಾಷೆಗಳ ೨೨ ನಾಟಕಗಳು ಪ್ರದರ್ಶನಗೊಂಡವು.
ಬಹುರೂಪಿ ನಾಟಕೋತ್ಸವದ ಅಂತಿಮ ದಿನವಾದ ಭಾನುವಾರ ರಂಗಾಯಣದ ಅಂಗಳ ಕಾಲಿಡಲು ಸಾಧ್ಯವಾಗದ ರೀತಿಯಲ್ಲಿ ರಂಗಾಸಕ್ತರಿಂದ ಕಿಕ್ಕಿರಿದು ತುಂಬಿದ್ದರು. ಕೊನೆಯ ದಿನದ ಬಹುರೂಪಿಯಲ್ಲಿ ಕೇರಿ ಹಾಡು, ನಾಟಕವೇ ಪ್ರಧಾನ ಆಕರ್ಷಣೆಯಾಗಿತ್ತು. ಮಧ್ಯಾಹ್ನದವರೆಗೂ ರಂಗಾಯಣದ ಆವರಣ ಭಣಗುಟ್ಟುತ್ತಿತ್ತು. ಸಂಜೆಯಾಗುತ್ತಲೇ ತಂಡೋಪತಂಡವಾಗಿ ರಂಗಾಯಣದತ್ತ ಆಗಮಿಸಿದ ಸಾರ್ವಜನಿಕರು ನಾಟಕೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಸಂಜೆ ನಡೆದ ಜಾನಪದೋತ್ಸವ ಮತ್ತು ನಾಟಕಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಿಂದರಿಜೋಗಿ ಆವರಣದಲ್ಲಿ ಉಡುಪು ನವೋದುಂ ಸಾಂಸ್ಕೃತಿಕ ಕಲಾ ಮೇಳದ ತಂಡವೂ ತುಳು ಸಾಂಸ್ಕೃತಿಕ ನೃತ್ಯ ನೋಡಲು ಹೆಚ್ಚಿನ ಜನರು ಸೇರಿದ್ದರು. ಇನ್ನು ಶಿವಮೊಗ್ಗದ ಶೋಭಾ ಮತ್ತು ತಂಡ ಪ್ರದರ್ಶಿಸಿದ ಲಂಬಾಣಿ ನತ್ಯ ನೋಡಿ ಮಾರುಹೋದರು. ಅಂತಿಮ ದಿನದಂದು ಪ್ರದರ್ಶನಗೊಂಡ ಕೆ.ಚಂದ್ರಶೇಖರ್ ನಿರ್ದೇಶನದ ಕೇರಿ ಹಾಡು, ಗಣೇಶ್ ಮಂದಾರ್ತಿ ನಿರ್ದೇಶನದ ಮೈ ಫ್ಯಾಮಿಲಿ, ಎಚ್.ಎಸ್.ಉಮೇಶ್ ನಿರ್ದೇಶನದ ಕನ್ನಡ ನಾಟಕಗಳು ಮತ್ತು ಬಹರುಲ್ ಇಸ್ಲಾಂ ನಿರ್ದೇಶನದಲ್ಲಿ ಅಸ್ಸಾಂನ ಸೀಗಲ್ ಥಿಯೇಟರ್ ಊಂಚಾಯಿ ಹಿಂದಿ ನಾಟಕ ಪ್ರದರ್ಶನಗೊಂಡಿತು. ಇದರಲ್ಲಿ ವನರಂಗದಲ್ಲಿ ನಡೆದ ಕೇರಿ ಹಾಡು ಮತ್ತು ಕಿರುರಂಗಮಂದಿರ ಹಾನ್ ಶಾಂತಿ ಕುಟೀರ ನಾಟಕ್ಕೆ ಜನ ಜಂಗುಳಿ ಕಂಡು ಬಂದಿತ್ತು. ಇತರರ ನಾಟಕಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…
ನನ್ನ ಮನಸ್ಸಿನಲ್ಲಿ ಆಳವಾಗಿ ಇಳಿದ ಗಾಂಧಿಯವರ ಅಹಿಂಸಾ ಮಾರ್ಗ ಗಾಂಧಿಜಿ ಅವರ ಅಹಿಂಸಾ ಮಾರ್ಗ ಮತ್ತು ಸತ್ಯಾಗ್ರಹ ಚಳವಳಿಗಳು ನನ್ನ…
ಡಾ.ಎಂ.ಡಿ.ಉಮೇಶ ನೆಲ್ಸನ್ ಮಂಡೇಲಾರವರ ಮೇಲೆ ಗಾಂಧೀಜಿ ಅವರು ಆಳವಾದ ಪ್ರಭಾವವನ್ನು ಬೀರಿದ್ದರು. ಮುಖ್ಯವಾಗಿ ಅಹಿಂಸಾತ್ಮಕ ಪ್ರತಿರೋಧ ಮತ್ತು ಸತ್ಯಾಗ್ರಹದ ಮೂಲಕ…
ನಮ್ಮ ತಂದೆ ಪೋರ್ಬಂದರನ್ನು ಬಿಟ್ಟು ರಾಜ ಕೋಬಿಯ ರಾಜಾಸ್ಥಾನಿಕ ನ್ಯಾಯಾಲಯದ ಸದಸ್ಯರಾಗಿ ಹೊರಟಾಗ, ನನಗೆ ಕೇವಲ ಏಳು ವರ್ಷಗಳು. ಅಲ್ಲಿ…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಸಹಭಾಗಿತ್ವದಲಿ ಎಳೆಯ ಮಕಳ ಅಂಗಳಕೆ…