ಮೈಸೂರು ನಗರ

ಬಹುರೂಪಿ ನಾಟಕೋತ್ಸವಕ್ಕೆ ವರ್ಣರಂಜಿತ ತೆರೆ

ಮೈಸೂರು: ಆರು ದಿನಗಳ ಕಾಲ ‘ಬಿಡುಗಡೆ’ ಆಶಯ ಹೊತ್ತು ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.

ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಯ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಛಾಾಯಾ ಚಿತ್ರಗಳ ಪ್ರದರ್ಶನ, ಬೀದಿ ನಾಟಕ ಪ್ರದರ್ಶನದ ಮೂಲಕ ಪ್ರೇಕ್ಷಕ ವರ್ಗಕ್ಕೆ ರಸದೌತಣ ಉಣಬಡಿಸಿತು.

ಪುಸ್ತಕ ಮೇಳ, ದೇಶಿ ತಿನಿಸು ಮೇಳ, ಕರಕುಶಲ ಮೇಳ ಹೀಗೆ ನಾನಾ ಕಾರ್ಯ ಕ್ರಮದ  ಮೂಲಕ ಎಲ್ಲಾ ವರ್ಗದ ಜನರನ್ನು ಬೆಸೆಯಿತು. ವನರಂಗ, ಕಲಾಮಂದಿರ, ಕಿರುರಂಗಮಂದಿರ, ಭೂಮಿಗೀತಾ ಸಭಾಂಗಣದಲ್ಲಿ ಕನ್ನಡ, ಹಿಂದಿ, ಮಲೆಯಾಳಂ, ತಮಿಳು ಸೇರಿದಂತೆ ಇತರೆ ಭಾಷೆಗಳ ೨೨ ನಾಟಕಗಳು ಪ್ರದರ್ಶನಗೊಂಡವು.

ಬಹುರೂಪಿ ನಾಟಕೋತ್ಸವದ ಅಂತಿಮ ದಿನವಾದ ಭಾನುವಾರ ರಂಗಾಯಣದ ಅಂಗಳ ಕಾಲಿಡಲು ಸಾಧ್ಯವಾಗದ ರೀತಿಯಲ್ಲಿ ರಂಗಾಸಕ್ತರಿಂದ ಕಿಕ್ಕಿರಿದು ತುಂಬಿದ್ದರು. ಕೊನೆಯ ದಿನದ ಬಹುರೂಪಿಯಲ್ಲಿ ಕೇರಿ ಹಾಡು, ನಾಟಕವೇ ಪ್ರಧಾನ ಆಕರ್ಷಣೆಯಾಗಿತ್ತು. ಮಧ್ಯಾಹ್ನದವರೆಗೂ ರಂಗಾಯಣದ ಆವರಣ ಭಣಗುಟ್ಟುತ್ತಿತ್ತು. ಸಂಜೆಯಾಗುತ್ತಲೇ ತಂಡೋಪತಂಡವಾಗಿ ರಂಗಾಯಣದತ್ತ ಆಗಮಿಸಿದ ಸಾರ್ವಜನಿಕರು ನಾಟಕೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.

ಸಂಜೆ ನಡೆದ ಜಾನಪದೋತ್ಸವ ಮತ್ತು ನಾಟಕಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಿಂದರಿಜೋಗಿ ಆವರಣದಲ್ಲಿ ಉಡುಪು ನವೋದುಂ ಸಾಂಸ್ಕೃತಿಕ ಕಲಾ ಮೇಳದ ತಂಡವೂ ತುಳು ಸಾಂಸ್ಕೃತಿಕ ನೃತ್ಯ ನೋಡಲು ಹೆಚ್ಚಿನ ಜನರು ಸೇರಿದ್ದರು. ಇನ್ನು ಶಿವಮೊಗ್ಗದ ಶೋಭಾ ಮತ್ತು ತಂಡ ಪ್ರದರ್ಶಿಸಿದ ಲಂಬಾಣಿ ನತ್ಯ ನೋಡಿ ಮಾರುಹೋದರು. ಅಂತಿಮ ದಿನದಂದು ಪ್ರದರ್ಶನಗೊಂಡ ಕೆ.ಚಂದ್ರಶೇಖರ್ ನಿರ್ದೇಶನದ ಕೇರಿ ಹಾಡು, ಗಣೇಶ್ ಮಂದಾರ್ತಿ ನಿರ್ದೇಶನದ  ಮೈ ಫ್ಯಾಮಿಲಿ,  ಎಚ್.ಎಸ್.ಉಮೇಶ್ ನಿರ್ದೇಶನದ ಕನ್ನಡ ನಾಟಕಗಳು ಮತ್ತು ಬಹರುಲ್ ಇಸ್ಲಾಂ ನಿರ್ದೇಶನದಲ್ಲಿ ಅಸ್ಸಾಂನ ಸೀಗಲ್ ಥಿಯೇಟರ್ ಊಂಚಾಯಿ ಹಿಂದಿ ನಾಟಕ ಪ್ರದರ್ಶನಗೊಂಡಿತು. ಇದರಲ್ಲಿ ವನರಂಗದಲ್ಲಿ ನಡೆದ ಕೇರಿ ಹಾಡು ಮತ್ತು ಕಿರುರಂಗಮಂದಿರ ಹಾನ್‌  ಶಾಂತಿ ಕುಟೀರ ನಾಟಕ್ಕೆ ಜನ ಜಂಗುಳಿ ಕಂಡು ಬಂದಿತ್ತು. ಇತರರ ನಾಟಕಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

15 mins ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

5 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

5 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

5 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

5 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

5 hours ago