ಮೈಸೂರು ನಗರ

ಬಹುರೂಪಿ ನಾಟಕೋತ್ಸವಕ್ಕೆ ವರ್ಣರಂಜಿತ ತೆರೆ

ಮೈಸೂರು: ಆರು ದಿನಗಳ ಕಾಲ ‘ಬಿಡುಗಡೆ’ ಆಶಯ ಹೊತ್ತು ನಡೆದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು.

ಆರು ವೇದಿಕೆಗಳಲ್ಲಿ ನಿತ್ಯ ನಾನಾ ಭಾಷೆಯ ನಾಟಕಗಳು, ವೈವಿಧ್ಯಮಯ ಜನಪದ ಕಾರ್ಯಕ್ರಮ, ಚಲನಚಿತ್ರೋತ್ಸವ, ಕರಕುಶಲ ಹಾಗೂ ಪುಸ್ತಕ ಪ್ರದರ್ಶನ, ಛಾಾಯಾ ಚಿತ್ರಗಳ ಪ್ರದರ್ಶನ, ಬೀದಿ ನಾಟಕ ಪ್ರದರ್ಶನದ ಮೂಲಕ ಪ್ರೇಕ್ಷಕ ವರ್ಗಕ್ಕೆ ರಸದೌತಣ ಉಣಬಡಿಸಿತು.

ಪುಸ್ತಕ ಮೇಳ, ದೇಶಿ ತಿನಿಸು ಮೇಳ, ಕರಕುಶಲ ಮೇಳ ಹೀಗೆ ನಾನಾ ಕಾರ್ಯ ಕ್ರಮದ  ಮೂಲಕ ಎಲ್ಲಾ ವರ್ಗದ ಜನರನ್ನು ಬೆಸೆಯಿತು. ವನರಂಗ, ಕಲಾಮಂದಿರ, ಕಿರುರಂಗಮಂದಿರ, ಭೂಮಿಗೀತಾ ಸಭಾಂಗಣದಲ್ಲಿ ಕನ್ನಡ, ಹಿಂದಿ, ಮಲೆಯಾಳಂ, ತಮಿಳು ಸೇರಿದಂತೆ ಇತರೆ ಭಾಷೆಗಳ ೨೨ ನಾಟಕಗಳು ಪ್ರದರ್ಶನಗೊಂಡವು.

ಬಹುರೂಪಿ ನಾಟಕೋತ್ಸವದ ಅಂತಿಮ ದಿನವಾದ ಭಾನುವಾರ ರಂಗಾಯಣದ ಅಂಗಳ ಕಾಲಿಡಲು ಸಾಧ್ಯವಾಗದ ರೀತಿಯಲ್ಲಿ ರಂಗಾಸಕ್ತರಿಂದ ಕಿಕ್ಕಿರಿದು ತುಂಬಿದ್ದರು. ಕೊನೆಯ ದಿನದ ಬಹುರೂಪಿಯಲ್ಲಿ ಕೇರಿ ಹಾಡು, ನಾಟಕವೇ ಪ್ರಧಾನ ಆಕರ್ಷಣೆಯಾಗಿತ್ತು. ಮಧ್ಯಾಹ್ನದವರೆಗೂ ರಂಗಾಯಣದ ಆವರಣ ಭಣಗುಟ್ಟುತ್ತಿತ್ತು. ಸಂಜೆಯಾಗುತ್ತಲೇ ತಂಡೋಪತಂಡವಾಗಿ ರಂಗಾಯಣದತ್ತ ಆಗಮಿಸಿದ ಸಾರ್ವಜನಿಕರು ನಾಟಕೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.

ಸಂಜೆ ನಡೆದ ಜಾನಪದೋತ್ಸವ ಮತ್ತು ನಾಟಕಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಕಿಂದರಿಜೋಗಿ ಆವರಣದಲ್ಲಿ ಉಡುಪು ನವೋದುಂ ಸಾಂಸ್ಕೃತಿಕ ಕಲಾ ಮೇಳದ ತಂಡವೂ ತುಳು ಸಾಂಸ್ಕೃತಿಕ ನೃತ್ಯ ನೋಡಲು ಹೆಚ್ಚಿನ ಜನರು ಸೇರಿದ್ದರು. ಇನ್ನು ಶಿವಮೊಗ್ಗದ ಶೋಭಾ ಮತ್ತು ತಂಡ ಪ್ರದರ್ಶಿಸಿದ ಲಂಬಾಣಿ ನತ್ಯ ನೋಡಿ ಮಾರುಹೋದರು. ಅಂತಿಮ ದಿನದಂದು ಪ್ರದರ್ಶನಗೊಂಡ ಕೆ.ಚಂದ್ರಶೇಖರ್ ನಿರ್ದೇಶನದ ಕೇರಿ ಹಾಡು, ಗಣೇಶ್ ಮಂದಾರ್ತಿ ನಿರ್ದೇಶನದ  ಮೈ ಫ್ಯಾಮಿಲಿ,  ಎಚ್.ಎಸ್.ಉಮೇಶ್ ನಿರ್ದೇಶನದ ಕನ್ನಡ ನಾಟಕಗಳು ಮತ್ತು ಬಹರುಲ್ ಇಸ್ಲಾಂ ನಿರ್ದೇಶನದಲ್ಲಿ ಅಸ್ಸಾಂನ ಸೀಗಲ್ ಥಿಯೇಟರ್ ಊಂಚಾಯಿ ಹಿಂದಿ ನಾಟಕ ಪ್ರದರ್ಶನಗೊಂಡಿತು. ಇದರಲ್ಲಿ ವನರಂಗದಲ್ಲಿ ನಡೆದ ಕೇರಿ ಹಾಡು ಮತ್ತು ಕಿರುರಂಗಮಂದಿರ ಹಾನ್‌  ಶಾಂತಿ ಕುಟೀರ ನಾಟಕ್ಕೆ ಜನ ಜಂಗುಳಿ ಕಂಡು ಬಂದಿತ್ತು. ಇತರರ ನಾಟಕಗಳಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago