ಮೈಸೂರು ನಗರ

ನಾಯಕತ್ವ ಬದಲಾವಣೆ ಹೇಳಿಕೆಗೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ನಾಯಕತ್ವ ಕುರಿತು ನೀಡಿರುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನೀಡಿರುವ ಹೇಳಿಕೆಯಲ್ಲಿ ತಪ್ಪೇನಿಲ್ಲ. ಆದರೆ ನನ್ನ ಹೇಳಿಕೆಯನ್ನು ಬೇರೆ ಬೇರೆ ರೀತಿ ಬಿಂಬಿಸುತ್ತಿದ್ದಾರೆ. ನಾನು ಏನು ಹೇಳಬೇಕೋ ಅದನ್ನು ಹೇಳಿಯಾಗಿದೆ. ಅನಗತ್ಯವಾಗಿ ಮತ್ತೆ ಅದನ್ನೇ ಮಾತನಾಡಿ ವಿವಾದ ಸೃಷ್ಟಿ ಮಾಡುವುದಿಲ್ಲ. ನನ್ನ ಹೇಳಿಕೆ ವಿವಾದ ಪಡೆದ ಕ್ಷಣವೇ ಅದಕ್ಕೆ ಸ್ಪಷ್ಟೀಕರಣ ಕೊಟ್ಟಿದ್ದೇನೆ. ಮಾಧ್ಯಮದ ಮುಂದೆ ಮತ್ತೆ ಏನೂ ಮಾತನಾಡುವುದಿಲ್ಲ. ಈ ವಿಚಾರದ ಬಗ್ಗೆ ಎಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ಒಳಗೆ ಮಾತನಾಡುತ್ತೇನೆ ಎಂದರು.

ಇದನ್ನೂ ಓದಿ: ಈಗಿನ ಪರಿಸ್ಥಿತಿಗೆ ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ: ಯತೀಂದ್ರ ಸಿದ್ದರಾಮಯ್ಯ

ಈ ವಿಚಾರವಾಗಿ ಪಕ್ಷದಿಂದ ನೋಟೀಸ್ ಬಂದಾಗ ನೋಡಿಕೊಳ್ಳೋಣ ಬಿಡಿ. ಪಕ್ಷ ನನಗೆ ನೋಟಿಸ್ ಕೊಟ್ಟರೆ ಸೂಕ್ತ ಉತ್ತರ ಕೊಡುತ್ತೇನೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ. ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಯಾವುದೂ ಇಲ್ಲ. ಕೇವಲ ಊಹಾಪೋಹ ಅಷ್ಟೇ ಎಂದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

12 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

12 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

12 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

12 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

12 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

12 hours ago