ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು ನೀಡಿದ್ದು, ಈ ಸಂಬಂಧ ಕ್ರಮ ತೆಗೆದುಕೊಳ್ಳುವುದು ರಾಜ್ಯ ನಾಯಕರಿಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ನಮ್ಮಲ್ಲಿ ಗುಂಪುಗಳಿಲ್ಲ. ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಮೋರ್ಚಾ ಮತ್ತು ಪಕ್ಷದ ವತಿಯಿಂದಲೂ ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದೇವು. ಆ ಪ್ರತಿಭಟನೆಗೆ ಪ್ರತಾಪ ಸಿಂಹ ಅವರಿಗೂ ಆಹ್ವಾನ ನೀಡಿದ್ದೆವು. ಆದರೆ ಅವರು ಬರಲಿಲ್ಲ ಎಂದರು.
ಮುಂಚೆ ಎಂಪಿ ಆಗಿದ್ದಾಗ ಪ್ರತಾಪ್ ಸಿಂಹ ತುಂಬಾ ಬ್ಯೂಸಿ ಆಗಿದ್ದರು. ಅವರು ಹಸುವಿಗೆ ಪೂಜೆ ಮಾಡಿ ನಂತರ ಗೋ ಮಾತೆ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ಪ್ರತಿಭಟನೆ ಮಾಡಿರಬಹುದು. ಇದು ಪಕ್ಷದ ವತಿಯಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…