ಮೈಸೂರು ನಗರ

ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು: ರಾಜ್ಯಾಧ್ಯಕ್ಷರಿಗೆ ದೂರು ಪತ್ರ ರವಾನಿಸಿದ ಎಲ್‌.ನಾಗೇಂದ್ರ

ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್‌.ನಾಗೇಂದ್ರ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ದೂರು ನೀಡಿದ್ದು, ಈ ಸಂಬಂಧ ಕ್ರಮ ತೆಗೆದುಕೊಳ್ಳುವುದು ರಾಜ್ಯ ನಾಯಕರಿಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ನಮ್ಮಲ್ಲಿ ಗುಂಪುಗಳಿಲ್ಲ. ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಮೋರ್ಚಾ ಮತ್ತು ಪಕ್ಷದ ವತಿಯಿಂದಲೂ ಮೈಸೂರಿನಲ್ಲಿ ಪ್ರತಿಭಟನೆ ಮಾಡಿದ್ದೇವು. ಆ ಪ್ರತಿಭಟನೆಗೆ ಪ್ರತಾಪ ಸಿಂಹ ಅವರಿಗೂ ಆಹ್ವಾನ ನೀಡಿದ್ದೆವು. ಆದರೆ ಅವರು ಬರಲಿಲ್ಲ ಎಂದರು.

ಮುಂಚೆ ಎಂಪಿ ಆಗಿದ್ದಾಗ ಪ್ರತಾಪ್‌ ಸಿಂಹ ತುಂಬಾ ಬ್ಯೂಸಿ ಆಗಿದ್ದರು. ಅವರು ಹಸುವಿಗೆ ಪೂಜೆ ಮಾಡಿ ನಂತರ ಗೋ ಮಾತೆ ಕೆಚ್ಚಲು ಕೊಯ್ದ ಪ್ರಕರಣ ಖಂಡಿಸಿ ಪ್ರತಿಭಟನೆ ಮಾಡಿರಬಹುದು. ಇದು ಪಕ್ಷದ ವತಿಯಿಂದ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

36 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

37 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

41 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

42 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

47 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

52 mins ago